Featured

ಮಂಗಳೂರು:  ನನಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಸಂಬಂಧ ಇಲ್ಲ : ವಜ್ರದೇಹಿ ಸ್ವಾಮೀಜಿ – Vishwanews24

ಮಂಗಳೂರು:  ನನಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಸಂಬಂಧ ಇಲ್ಲ : ವಜ್ರದೇಹಿ ಮಠದ ಸ್ವಾಮೀಜಿ

ಮಂಗಳೂರು: ಬಿಜೆಪಿ ಟಿಕೆಟ್‍ಗಾಗಿ  ಡೀಲ್ ಪ್ರಕರಣದಲ್ಲಿ ಮತ್ತೊಬ್ಬ ಸ್ವಾಮೀಜಿ ಹೆಸರು ಕೇಳಿಬಂದಿದೆ. ಚೈತ್ರಾ ಕುಂದಾಪುರ  ಐಟಿ ಇಲಾಖೆಗೆ ಬರೆದ ಪತ್ರದಲ್ಲಿ ವಿಶ್ವ ಹಿಂದು ಪರಿಷತ್ ಸಂಘಟನೆಯಲ್ಲಿ ಗುರುತಿಸಿರುವ ಮಂಗಳೂರಿನ ವಜ್ರದೇಹಿ ಮಠದ  ರಾಜಶೇಖರಾನಂದ ಸ್ವಾಮೀಜಿ ಹೆಸರು ಕೇಳಿಬಂದಿದೆ.

ಈ ಸಂಬಂಧ  ಪ್ರತಿಕ್ರಿಯಿಸಿದ ಸ್ವಾಮೀಜಿ, ನನಗೂ ಆಕೆಯ ಪ್ರಕರಣಕ್ಕೂ ಸಂಬಂಧ ಇಲ್ಲ. ಜುಲೈ ತಿಂಗಳಲ್ಲಿ ಹಿಂದೂ ಸಂಘಟನೆಯ ಸತ್ಯಜಿತ್ ಸುರತ್ಕಲ್ ಫೋನ್ ಮಾಡಿದ್ದರು. ಗೋವಿಂದ ಪೂಜಾರಿ ಟಿಕೆಟ್ ವಿಚಾರದಲ್ಲಿ ನನಗೆ ಪ್ರಶ್ನೆ ಮಾಡಿದ್ದರು. ಆದರೆ ನನಗೇನೂ ತಿಳಿದಿರಲಿಲ್ಲ, ನನ್ನಲ್ಲಿ ಯಾಕೆ ಪ್ರಶ್ನೆ ಮಾಡುವುದೆಂದು ಕೇಳಿದ್ದೆ. ಬಳಿಕ ಅವರೇ ಫೋನ್ ಮಾಡಿ, ಚೈತ್ರಾ ಮತ್ತು ಅಭಿನವ ಹಾಲಶ್ರೀ ಹೆಸರಿದೆ ಎಂದು ಹೇಳಿದ್ದರು ಎಂದರು.

ಚೈತ್ರಾ ಜೊತೆ ಸಂಪರ್ಕ ಇದ್ದುದರಿಂದ ಆಕೆಗೆ ಫೋನ್ ಮಾಡಿ ಸ್ಪಷ್ಟನೆ ಕೇಳಿದ್ದೆ. ಮೂರು ಕೋಟಿ ದುಡ್ಡಿನ ಬಗ್ಗೆ ಕೇಳಿದಾಗ, ಒಂದೂವರೆ ಇದ್ದಿದ್ದು ಮೂರು ಕೋಟಿ ಆಯ್ತಾ? ಇನ್ನು ಅದು 4-5 ಕೋಟಿ ಆಗಬಹುದು ಎಂದು ಆಕೆ ಹೇಳಿದ್ದಳು, ಸತ್ಯ ಹೇಳು ಎಂದಿದ್ದೆ. ಆಕೆ ತನಗೇನೂ ಗೊತ್ತಿಲ್ಲ ಎಂದಿದ್ದರು, ಚಕ್ರವರ್ತಿ ಸೂಲಿಬೆಲೆ ಅವರಿಗೂ ಫೋನ್ ಮಾಡಿದ್ದೆ. ಅಭಿನವ ಹಾಲಶ್ರೀ ಸ್ವಾಮೀಜಿ, ಸೂಲಿಬೆಲೆ ಜೊತೆಗೆ ಗುರುತಿಸಿದ್ದರಿಂದ ಅವರಿಗೂ ವಿಷಯ ತಿಳಿಸಿದ್ದೆ ಎಂದು ಹೇಳಿದರು.

ನಾವು ವಿಶ್ವ ಹಿಂದೂ ಪರಿಷತ್ತಿನಲ್ಲಿ ಗುರುತಿಸಿದ್ದರಿಂದ ಶರಣ್ ಪಂಪ್ ವೆಲ್ ಅವರಿಗೂ ವಿಷಯ ತಿಳಿಸಿದ್ದೇವೆ. ನಿಮಗೇನೂ ಸಂಪರ್ಕ ಇಲ್ಲಾಂದ್ರೆ ನೀವ್ಯಾಕೆ ತಲೆ ಬಿಸಿ ಮಾಡ್ತೀರಿ ಎಂದು ಶರಣ್ ಹೇಳಿದ್ದರು. ಈಗ ನನ್ನ ಹೆಸರನ್ನು ಐಟಿ ಇಲಾಖೆಗೆ ಬರೆದ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ವಿಷಯ ಇಷ್ಟೇ ಆಗಿದ್ದರೂ, ನನ್ನ ಹೆಸರು ಬಂದಿರುವುದು ಬೇಸರವಾಗಿದೆ. ಹಣದ ವಿಚಾರದಲ್ಲಿ ತನಗೇನೂ ಗೊತ್ತಿಲ್ಲ, ಚೈತ್ರಾಳ ಪರಿಚಯ ಇದ್ದುದು ಹೌದು. ಹಾಗಂತ, ಆಕೆಯ ಜೊತೆಗೆ ಬೇರೇನೂ ಸಂಪರ್ಕ, ಮಾತುಕತೆ, ವಹಿವಾಟು ಇಲ್ಲ ಎಂದು ಅವರು ತಿಳಿಸಿದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago