ಮಂಗಳೂರು: ಸರಕಾರ ನನಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದಿದೆ. ನನ್ನ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆ ಎಂದು ಹಿಂದು ಸಂಘಟನೆಯ ಮುಖಂಡ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ನನಗೆ ಪ್ರಾಣ ಬೆದರಿಕೆ ಇದ್ದುದರಿಂದ ಪೊಲೀಸರೇ ಭದ್ರತಾ ಸಿಬ್ಬಂದಿ ಒದಗಿಸಿದ್ದರು. ಹದಿನಾರು ವರ್ಷಗಳಿಂದ ಇದ್ದ ಸಿಬಂದಿಯನ್ನು ಈಗ ಚುನಾವಣೆ ನೆಪದಲ್ಲಿ ವಾಪಸ್ ಪಡೆಯಲಾಗಿದೆ. ನನ್ನ ರಿವಾಲ್ವರ್ ಕೂಡ ತೆಗೆದಿಟ್ಟುಕೊಂಡಿದ್ದಾರೆ.
ಈ ಬಗ್ಗೆ ಗೃಹ ಸಚಿವರು, ಸಂಘ ಪರಿವಾರದ ಪ್ರಮುಖರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ನಾನು ಹಿಂದುತ್ವಕ್ಕಾಗಿ ರಾಷ್ಟ್ರ ಹಿತಕ್ಕಾಗಿ ನಡೆಸಿದ ಹೋರಾಟದಿಂದ ಬೆದರಿಕೆ ಕರೆಗಳು ಬಂದಿದ್ದೇ ಹೊರತು ನನ್ನ ವೈಯಕ್ತಿಕ ವ್ಯವಹಾರಕ್ಕಲ್ಲ ಎಂದರು.
ನನ್ನ ಬಾಯಿ ಮುಚ್ಚಿಸಲು ಇಂತಹ ಕ್ಷುಲ್ಲಕ ಕೆಲಸ ಮಾಡುತ್ತಿದ್ದಾರೆ. ಆದರೆ ನಾನು ಹೋರಾಟ ಮುಂದುವರೆಸುತ್ತೇನೆ. ರಾಜಕೀಯ ಅಪೇಕ್ಷೆ ಇಲ್ಲ. ನನ್ನ ಹತ್ಯೆಯಾದರೆ ಸಂಘ ಪರಿವಾರದ ಯಾವ ನಾಯಕರೂ ನನ್ನ ಅಂತಿಮ ದರ್ಶನಕ್ಕೆ ಬರಬಾರದು, ಶವ ಮೆರವಣಿಗೆ ಮಾಡಬಾರದು ಎಂದು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…