ಮಂಗಳೂರು: ಸರಕಾರ ನನಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದಿದೆ. ನನ್ನ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆ ಎಂದು ಹಿಂದು ಸಂಘಟನೆಯ ಮುಖಂಡ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ನನಗೆ ಪ್ರಾಣ ಬೆದರಿಕೆ ಇದ್ದುದರಿಂದ ಪೊಲೀಸರೇ ಭದ್ರತಾ ಸಿಬ್ಬಂದಿ ಒದಗಿಸಿದ್ದರು. ಹದಿನಾರು ವರ್ಷಗಳಿಂದ ಇದ್ದ ಸಿಬಂದಿಯನ್ನು ಈಗ ಚುನಾವಣೆ ನೆಪದಲ್ಲಿ ವಾಪಸ್ ಪಡೆಯಲಾಗಿದೆ. ನನ್ನ ರಿವಾಲ್ವರ್ ಕೂಡ ತೆಗೆದಿಟ್ಟುಕೊಂಡಿದ್ದಾರೆ.
ಈ ಬಗ್ಗೆ ಗೃಹ ಸಚಿವರು, ಸಂಘ ಪರಿವಾರದ ಪ್ರಮುಖರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ನಾನು ಹಿಂದುತ್ವಕ್ಕಾಗಿ ರಾಷ್ಟ್ರ ಹಿತಕ್ಕಾಗಿ ನಡೆಸಿದ ಹೋರಾಟದಿಂದ ಬೆದರಿಕೆ ಕರೆಗಳು ಬಂದಿದ್ದೇ ಹೊರತು ನನ್ನ ವೈಯಕ್ತಿಕ ವ್ಯವಹಾರಕ್ಕಲ್ಲ ಎಂದರು.
ನನ್ನ ಬಾಯಿ ಮುಚ್ಚಿಸಲು ಇಂತಹ ಕ್ಷುಲ್ಲಕ ಕೆಲಸ ಮಾಡುತ್ತಿದ್ದಾರೆ. ಆದರೆ ನಾನು ಹೋರಾಟ ಮುಂದುವರೆಸುತ್ತೇನೆ. ರಾಜಕೀಯ ಅಪೇಕ್ಷೆ ಇಲ್ಲ. ನನ್ನ ಹತ್ಯೆಯಾದರೆ ಸಂಘ ಪರಿವಾರದ ಯಾವ ನಾಯಕರೂ ನನ್ನ ಅಂತಿಮ ದರ್ಶನಕ್ಕೆ ಬರಬಾರದು, ಶವ ಮೆರವಣಿಗೆ ಮಾಡಬಾರದು ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…