ಮಂಗಳೂರು : ನಮ್ಮ ಸರ್ಕಾರ ಹಿಂದುತ್ವದ ಆಧಾರದಲ್ಲಿ ನಡೆಯೋ ಸರ್ಕಾರ : ಸಚಿವ ವಿ ಸುನೀಲ್ ಕುಮಾರ್ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ನಮ್ಮ ಸರ್ಕಾರ ಹಿಂದುತ್ವದ ಆಧಾರದಲ್ಲಿ ನಡೆಯೋ ಸರ್ಕಾರ : ಸಚಿವ ವಿ ಸುನೀಲ್ ಕುಮಾರ್ – Vishwanews24

ಮಂಗಳೂರು : ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ದ.ಕ ಜಿಲ್ಲಾ ಬಿಜೆಪಿ‌ ಕಚೇರಿಗೆ ಭೇಟಿ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಜಿಲ್ಲೆ, ಬಿಜೆಪಿ ಮತ್ತು ಪರಿವಾರ ಸಂಘಟನೆಗಳ ಭದ್ರಕೋಟೆಯಾಗಿದೆ. ನಾವೇ ಕಟ್ಟಿ ಬೆಳೆಸಿದ ಸಂಘಟನೆ, ನಮ್ಮ ವಿಚಾರವನ್ನು ಇನ್ನಷ್ಟು ಜನರಿಗೆ ತಲುಪಿಸಬೇಕಿದೆ. ನಾನು ಈ ಜಿಲ್ಲೆಯ ಉಸ್ತುವಾರಿ ಸಚಿವ ಅನ್ನೋದಕ್ಕಿಂತಲೂ ಕಾರ್ಯಕರ್ತರ ಸಚಿವ. ನಾನು ಕಾರ್ಯಕರ್ತರಿಗೆ ಬೇಕಾದ ಎಲ್ಲಾ ನ್ಯಾಯವನ್ನ ಕೊಡ್ತೇನೆ. ಯಾವ್ಯಾವ ಇಲಾಖೆಯಲ್ಲಿ ನಮ್ಮ ಕಾರ್ಯಕರ್ತರಿಗೆ ತೊಂದರೆಯಾಗ್ತಿದೆ. ನೋಡ್ತೇನೆ. ಕಾರ್ಯಕರ್ತರ ಧ್ಬನಿಯಾಗಿ ನಾನು ಇಲ್ಲಿ ಕೆಲಸ ಮಾಡ್ತೇನೆ ಎಂದು ಹೇಳಿದರು.

ಇದನ್ನೂ ಓದಿ :

ಮಂಗಳೂರು : ಐಸಿಯು ರೋಗಿಗಳಿಗೆ ಚಿಕಿತ್ಸೆ ನೀಡುವ ಬದಲು ತಮ್ಮ ಕಂಪ್ಯೂಟರ್‌ನಲ್ಲಿ ವೀಡಿಯೋ ಗೇಮ್‌ನಲ್ಲಿ ಮಗ್ನರಾದ ವೆನ್ಲಾಕ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು – Vishwanews24

ಉಡುಪಿ ಜಿಲ್ಲೆಯ ಕೆಲ ವಿಷಯ ಗಮನಿಸಬೇಕಿದೆ ಎಂದು ಹೇಳಿದ ಸುನೀಲ್ ಕುಮಾರ್, ಕಾರ್ಕಳದ ಜನರ ಋಣವನ್ನೂ ತೀರಿಸಬೇಕಿದೆ. ನಮ್ಮ ಸರ್ಕಾರ ಹಿಂದುತ್ವದ ಆಧಾರದಲ್ಲಿ ನಡೆಯೋ ಸರ್ಕಾರ, ಕರ್ನಾಟಕದಲ್ಲಿ ಇರೋದು ಹಿಂದೂ ಪರ ಸರ್ಕಾರ. ಆ ಕಾರಣದಿಂದಲೇ ನಾವು ರಾಜ್ಯದಲ್ಲಿ ಕೆಲ ನಿರ್ದಿಷ್ಟ ಯೋಜನೆಗಳನ್ನು ಪ್ರಕಟಿಸಿದ್ದೇವೆ. ಗೋಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನು, ದೇವಸ್ಥಾನ ಸ್ವತಂತ್ರದ ಚಿಂತನೆಗಳಿವೆ. ಈ ಎಲ್ಲಾ ವಿಚಾರಗಳಿಗೆ ಧಕ್ಕೆ ಬಾರದಂತೆ ನಾನು ಕೆಲಸ ‌ಮಾಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವ ರಾಜ್ಯದ ಉಳಿದ ಜಿಲ್ಲೆಗಳಿಗೂ ಆಗಬೇಕು. ಕಾಂಗ್ರೆಸ್ ವಿವಾದ, ಅಪಪ್ರಚಾರದ ಮೂಲಕ ಭ್ರಮೆಯಲ್ಲಿ ಸಾಗುತ್ತಿದೆ. ಮೇಕೆದಾಟು ಮತ್ತು ನಾರಾಯಣ ಗುರು ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂದು ಹೇಳಿದರು.

ಇದನ್ನೂ ಓದಿ :

ಎಣ್ಣೆ ಮತ್ತಿನಲ್ಲಿ ಪೊಲೀಸರೊಂದಿಗೆ ಕಿರಿಕ್: ಗಟ್ಟಿಮೇಳ ನಟ ರಕ್ಷಿತ್ ಸೇರಿ 7 ಮಂದಿ ವಿರುದ್ಧ FIR ದಾಖಲು – Vishwanews24

Leave a Reply