ಮಂಗಳೂರು : ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ದ.ಕ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಜಿಲ್ಲೆ, ಬಿಜೆಪಿ ಮತ್ತು ಪರಿವಾರ ಸಂಘಟನೆಗಳ ಭದ್ರಕೋಟೆಯಾಗಿದೆ. ನಾವೇ ಕಟ್ಟಿ ಬೆಳೆಸಿದ ಸಂಘಟನೆ, ನಮ್ಮ ವಿಚಾರವನ್ನು ಇನ್ನಷ್ಟು ಜನರಿಗೆ ತಲುಪಿಸಬೇಕಿದೆ. ನಾನು ಈ ಜಿಲ್ಲೆಯ ಉಸ್ತುವಾರಿ ಸಚಿವ ಅನ್ನೋದಕ್ಕಿಂತಲೂ ಕಾರ್ಯಕರ್ತರ ಸಚಿವ. ನಾನು ಕಾರ್ಯಕರ್ತರಿಗೆ ಬೇಕಾದ ಎಲ್ಲಾ ನ್ಯಾಯವನ್ನ ಕೊಡ್ತೇನೆ. ಯಾವ್ಯಾವ ಇಲಾಖೆಯಲ್ಲಿ ನಮ್ಮ ಕಾರ್ಯಕರ್ತರಿಗೆ ತೊಂದರೆಯಾಗ್ತಿದೆ. ನೋಡ್ತೇನೆ. ಕಾರ್ಯಕರ್ತರ ಧ್ಬನಿಯಾಗಿ ನಾನು ಇಲ್ಲಿ ಕೆಲಸ ಮಾಡ್ತೇನೆ ಎಂದು ಹೇಳಿದರು.
ಇದನ್ನೂ ಓದಿ :
ಉಡುಪಿ ಜಿಲ್ಲೆಯ ಕೆಲ ವಿಷಯ ಗಮನಿಸಬೇಕಿದೆ ಎಂದು ಹೇಳಿದ ಸುನೀಲ್ ಕುಮಾರ್, ಕಾರ್ಕಳದ ಜನರ ಋಣವನ್ನೂ ತೀರಿಸಬೇಕಿದೆ. ನಮ್ಮ ಸರ್ಕಾರ ಹಿಂದುತ್ವದ ಆಧಾರದಲ್ಲಿ ನಡೆಯೋ ಸರ್ಕಾರ, ಕರ್ನಾಟಕದಲ್ಲಿ ಇರೋದು ಹಿಂದೂ ಪರ ಸರ್ಕಾರ. ಆ ಕಾರಣದಿಂದಲೇ ನಾವು ರಾಜ್ಯದಲ್ಲಿ ಕೆಲ ನಿರ್ದಿಷ್ಟ ಯೋಜನೆಗಳನ್ನು ಪ್ರಕಟಿಸಿದ್ದೇವೆ. ಗೋಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನು, ದೇವಸ್ಥಾನ ಸ್ವತಂತ್ರದ ಚಿಂತನೆಗಳಿವೆ. ಈ ಎಲ್ಲಾ ವಿಚಾರಗಳಿಗೆ ಧಕ್ಕೆ ಬಾರದಂತೆ ನಾನು ಕೆಲಸ ಮಾಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವ ರಾಜ್ಯದ ಉಳಿದ ಜಿಲ್ಲೆಗಳಿಗೂ ಆಗಬೇಕು. ಕಾಂಗ್ರೆಸ್ ವಿವಾದ, ಅಪಪ್ರಚಾರದ ಮೂಲಕ ಭ್ರಮೆಯಲ್ಲಿ ಸಾಗುತ್ತಿದೆ. ಮೇಕೆದಾಟು ಮತ್ತು ನಾರಾಯಣ ಗುರು ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂದು ಹೇಳಿದರು.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…