ಮಂಗಳೂರು : ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ದ.ಕ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಜಿಲ್ಲೆ, ಬಿಜೆಪಿ ಮತ್ತು ಪರಿವಾರ ಸಂಘಟನೆಗಳ ಭದ್ರಕೋಟೆಯಾಗಿದೆ. ನಾವೇ ಕಟ್ಟಿ ಬೆಳೆಸಿದ ಸಂಘಟನೆ, ನಮ್ಮ ವಿಚಾರವನ್ನು ಇನ್ನಷ್ಟು ಜನರಿಗೆ ತಲುಪಿಸಬೇಕಿದೆ. ನಾನು ಈ ಜಿಲ್ಲೆಯ ಉಸ್ತುವಾರಿ ಸಚಿವ ಅನ್ನೋದಕ್ಕಿಂತಲೂ ಕಾರ್ಯಕರ್ತರ ಸಚಿವ. ನಾನು ಕಾರ್ಯಕರ್ತರಿಗೆ ಬೇಕಾದ ಎಲ್ಲಾ ನ್ಯಾಯವನ್ನ ಕೊಡ್ತೇನೆ. ಯಾವ್ಯಾವ ಇಲಾಖೆಯಲ್ಲಿ ನಮ್ಮ ಕಾರ್ಯಕರ್ತರಿಗೆ ತೊಂದರೆಯಾಗ್ತಿದೆ. ನೋಡ್ತೇನೆ. ಕಾರ್ಯಕರ್ತರ ಧ್ಬನಿಯಾಗಿ ನಾನು ಇಲ್ಲಿ ಕೆಲಸ ಮಾಡ್ತೇನೆ ಎಂದು ಹೇಳಿದರು.
ಇದನ್ನೂ ಓದಿ :
ಉಡುಪಿ ಜಿಲ್ಲೆಯ ಕೆಲ ವಿಷಯ ಗಮನಿಸಬೇಕಿದೆ ಎಂದು ಹೇಳಿದ ಸುನೀಲ್ ಕುಮಾರ್, ಕಾರ್ಕಳದ ಜನರ ಋಣವನ್ನೂ ತೀರಿಸಬೇಕಿದೆ. ನಮ್ಮ ಸರ್ಕಾರ ಹಿಂದುತ್ವದ ಆಧಾರದಲ್ಲಿ ನಡೆಯೋ ಸರ್ಕಾರ, ಕರ್ನಾಟಕದಲ್ಲಿ ಇರೋದು ಹಿಂದೂ ಪರ ಸರ್ಕಾರ. ಆ ಕಾರಣದಿಂದಲೇ ನಾವು ರಾಜ್ಯದಲ್ಲಿ ಕೆಲ ನಿರ್ದಿಷ್ಟ ಯೋಜನೆಗಳನ್ನು ಪ್ರಕಟಿಸಿದ್ದೇವೆ. ಗೋಹತ್ಯೆ ನಿಷೇಧ ಕಾನೂನು, ಮತಾಂತರ ನಿಷೇಧ ಕಾನೂನು, ದೇವಸ್ಥಾನ ಸ್ವತಂತ್ರದ ಚಿಂತನೆಗಳಿವೆ. ಈ ಎಲ್ಲಾ ವಿಚಾರಗಳಿಗೆ ಧಕ್ಕೆ ಬಾರದಂತೆ ನಾನು ಕೆಲಸ ಮಾಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವ ರಾಜ್ಯದ ಉಳಿದ ಜಿಲ್ಲೆಗಳಿಗೂ ಆಗಬೇಕು. ಕಾಂಗ್ರೆಸ್ ವಿವಾದ, ಅಪಪ್ರಚಾರದ ಮೂಲಕ ಭ್ರಮೆಯಲ್ಲಿ ಸಾಗುತ್ತಿದೆ. ಮೇಕೆದಾಟು ಮತ್ತು ನಾರಾಯಣ ಗುರು ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂದು ಹೇಳಿದರು.
ಇದನ್ನೂ ಓದಿ :
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…