Featured

ಮಂಗಳೂರು: ನರ್ಸಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣ: 9 ಮಂದಿ ಅರೆಸ್ಟ್ – Vishwanews24

ಮಂಗಳೂರು: ನರ್ಸಿಂಗ್ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣ: 9 ಮಂದಿ ಅರೆಸ್ಟ್ – Vishwanews24

ಮಂಗಳೂರು :ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ತಮ್ಮ ಅಪಾರ್ಟ್ ಮೆಂಟ್ ನ ಕೊಠಡಿಯಲ್ಲಿ ಅಕ್ರಮ ಬಂಧನದಲ್ಲಿಟ್ಟು ಗಡ್ಡ ಬೋಳಿಸಿ, ಹಣ ನೀಡುವಂತೆ ಪೀಡಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿ ರ್‍ಯಾಗಿಂಗ್ ನಡೆಸಿದ ಆರೋಪದಲ್ಲಿ 9 ಮಂದಿಯನ್ನು ಪಾಂಡೇಶ್ವರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬಂಧಿತರನ್ನು ಅಭಿ, ಅಲೆಕ್ಸ್, ನಂದು, ಶ್ರೀಕುಮಾರ್, ಶಿಹಾಸ್, ಪ್ರವೀಶ್, ಗೋಪಿಕೃಷ್ಣ, ಹಸನ್, ವಿಷ್ಣು, ಜಾಸಿಲ್, ಅಲೆನ್ ಎಂದು ಗುರುತಿಸಲಾಗಿದ್ದು, ಬಂಧಿತರಲ್ಲಿ 7 ಮಂದಿ ಬೇರೊಂದು ಕಾಲೇಜಿನ ವಿದ್ಯಾರ್ಥಿಗಳು , ಓರ್ವ ಸಂತ್ರಸ್ತ ವಿದ್ಯಾರ್ಥಿಗಳ ಸೀನಿಯರ್ ಹಾಗೂ ಮತ್ತೋರ್ವ ಬಂಧಿಸಲ್ಪಟ್ಟವರು.

ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ ಅಮಲ್ ಗಿರೀಶ್ ಅವರು ಸ್ನೇಹಿತ ಕಾರ್ತಿಕ್ ವಿಜಯನ್ ಜತೆ ಅಪಾರ್ಟ್‌ಮೆಂಟ್ ಗೆ ತೆರಳುತ್ತಿದ್ದ ಸಂದರ್ಭ ಆರೋಪಿಗಳು ಇಬ್ಬರನ್ನು ಅವರ ರೂಮಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ಹಾಡಿಸಿದ್ದಾರೆ. ಗಡ್ಡವನ್ನು ಬೋಳಿಸಿದ್ದಾರೆ. ಹಣ ನೀಡುವಂತೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. 270 ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಹೆಲ್ಮೆಟ್ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಅಮಲ್ ಗಿರೀಶ್ ಪೊಲೀಸರಿಗೆ ದೂರು ನೀಡಿದ್ದರು. ಪಾಂಡೇಶ್ವರ ಠಾಣಾ ಇನ್ಸ್ಪೆಕ್ಟರ್ ಲೋಕೇಶ್ ಎ.ಸಿ. ಹಾಗು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್ಐ ಶೀತಲ್ ಅಲಗೂರ್ ಅವರು ಸಿಬ್ಬಂದಿ ಜತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

4 minutes ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

17 minutes ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

30 minutes ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

2 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

2 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

2 hours ago