ಮಂಗಳೂರು : ತಾನು ವಾಸವಾಗಿದ್ದ ಅಪಾರ್ಟ್ಮೆಂಟಿನ ಬಾಡಿಗೆ ಪ್ಲ್ಯಾಟ್ ನಲ್ಲಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಅತ್ತಾವರ ಮಂಜುಶೆಟ್ಟಿ ಕಾಂಪೌಂಡಿನಲ್ಲಿ ಅ.25 ರ ಶುಕ್ರವಾರ ತಡರಾತ್ರಿ ನಡೆದಿದೆ.
ವಿದ್ಯಾರ್ಥಿನಿಯನ್ನು ಕೇರಳ ಮೂಲದ ಅನುಪಮಾ (23) ಎಂದು ಗುರುತಿಸಲಾಗಿದೆ. . ವಿದ್ಯಾರ್ಥಿನಿಯು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದಳು. ಆದರೆ, ತಾನು ತಂಗಿದ್ದ ಪಿಜಿಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿದ ಸ್ಥಿತಿಯಲ್ಲಿ ಶುಕ್ರವಾರ ರಾತ್ರಿ ಆಕೆಯ ಮೃತದೇಹ ಪತ್ತೆಯಾಗಿದೆ.
ಅನುಪಮಾ ತಾಯಿ ವಿದೇಶದಲ್ಲಿದ್ದು, ಈಕೆ ಈ ಅಪಾರ್ಟ್ಮೆಂಟಿನಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯ ಹೂಡಿದ್ದಳು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರೇಮ ವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…