Featured

ಮಂಗಳೂರು : ನಳಿನ್ ಲವ್ ಜಿಹಾದ್ ಹೇಳಿಕೆ ಬಿಜೆಪಿ ಮತ್ತು ಸಂಘಪರಿವಾರದ ನೈಜ ಹಿಡನ್ ಅಜೆಂಡಾವನ್ನು ತೋರ್ಪಡಿಸಿದೆ : SDPI – VIshwanews24

ನಳಿನ್ ಲವ್ ಜಿಹಾದ್ ಹೇಳಿಕೆ ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತಾಗಿದೆ..

ಬಿಜೆಪಿ ಯಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂಬ ವಾಸ್ತವವನ್ನು ಬಹಿರಂಗ ಪಡಿಸಿದೆ..

ಮಂಗಳೂರು: ರಸ್ತೆ ಚರಂಡಿ ಅಭಿವೃದ್ಧಿ ವಿಷಯ ಬಿಟ್ಟು ಬಿಡಿ ಲವ್ ಜಿಹಾದ್ ಕಡೆಗೆ ಗಮನ ಕೊಡಿ ಎಂಬ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯು ಬಿಜೆಪಿ ಮತ್ತು ಸಂಘಪರಿವಾರದ ನೈಜ ಹಿಡನ್ ಅಜೆಂಡಾವನ್ನು ತೋರ್ಪಡಿಸಿ ಬಿಜೆಪಿ ಯಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂಬ ವಾಸ್ತವವನ್ನು ಬಹಿರಂಗ ಪಡಿಸಿದೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಗೊಳಿಸಿರುವ ಅವರು ಬಿಜೆಪಿ ಸಂಘಪರಿವಾರ ತನ್ನ ಹುಟ್ಟಿನಿಂದಲೇ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ದೇಶದ ನೈಜ ಸಮಸ್ಯೆಗಳನ್ನು ಮತ್ತು ಅಭಿವೃದ್ಧಿಯ ವಿಚಾರದಲ್ಲಿ ಆಸಕ್ತಿ ವಹಿಸದೆ ಜನರನ್ನು ಪರಸ್ಪರ ಧರ್ಮಾಧಾರಿತವಾಗಿ ವಿಭಜಿಸಿ ಆ ಮೂಲಕ ಕೋಮು ಗಲಭೆ ನಡೆಸಿ ಸಾರ್ವಜನಿಕ ಆಸ್ತಿ ಪಾಸ್ತಿ ಹಾಗೂ ಜನರ ಪ್ರಾಣ ಹಾನಿ ಮಾಡುವುದರಲ್ಲೇ ದಿನ ಕಳೆಯುತ್ತಿದೆ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಧರ್ಮದ ವಿಚಾರಗಳನ್ನು ಮುನ್ನೆಲೆಗೆ ತಂದೇ ಅಧಿಕಾರ ಪಡೆದು ತಮ್ಮ ಕೋಮು ವೈಷಮ್ಯವನ್ನು ಇನ್ನಷ್ಟು ಅಧಿಕಗೊಳಿಸಿದ್ದಾರೆ ಎಂದು ಕಿಡಿಕಾರಿದರು.

ಈಗ ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತಾಗಿದ್ದು, ಅಧಿಕಾರ ಚಲಾಯಿಸಲು ತಿಳಿಯದೆ ಅಭಿವೃದ್ಧಿ ವಿಚಾರಗಳನ್ನು ಬಿಟ್ಟು ಜನರನ್ನು ಭಾವನಾತ್ಮಕ ವಿಚಾರಗಳಿಗೆ ಪ್ರೋತ್ಸಾಹ ನೀಡಿ ಪರಸ್ಪರ ಗಲಭೆ ನಡೆಸುವ ಸಂಘಪರಿವಾರದ ಹಿಡನ್ ಅಜೆಂಡಾದ ಭಾಗವಾಗಿದೆ ಸಂಸದ ಕಟೀಲ್ ರವರ ಹೇಳಿಕೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ ಜಿಲ್ಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಇರುವುದರಿಂದ ಹಾಗೂ ಸ್ವಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಇವರ ವಿರುದ್ಧ ಇರುವುದರಿಂದ ಸಂಘಪರಿವಾರದ ಮುಖಂಡರ ಮನವೊಲಿಸಲು ಇಂತಹ ವಿಭಜನಕಾರಿ ಹೇಳಿಕೆ ನೀಡಿ ಟಿಕೆಟ್ ಪಡೆಯಲು ಪ್ರಯತ್ನಿಸುತ್ತಿರುವುದು ಜನರಿಗೆ ಅರ್ಥವಾಗದ ವಿಚಾರವೇನಲ್ಲ ಎಂದು ಅವರು ಹೇಳಿದ್ದಾರೆ.

ದ.ಕ ಪೋಲಿಸ್ ಇಲಾಖೆಯು ಏನು ಮಾಡುತ್ತಿದೆ. ಒಂದು ವೇಳೆ ಇಂತಹ ಹೇಳಿಕೆಯನ್ನು ಇತರ ಧರ್ಮದ ನಾಯಕರು ನೀಡಿರುತ್ತಿದ್ದರೆ ಕೂಡಲೇ ಕ್ರಮ ಕೈಗೊಳ್ಳುತ್ತಿರಲಿಲ್ಲವೇ? ನ್ಯಾಯದಲ್ಲಿ ತಾರತಮ್ಯ ಮಾಡುವ ಪೋಲಿಸ್ ಇಲಾಖೆಯ ಕ್ರಮವೂ ಖಂಡನೀಯ. ಪೊಲೀಸ್ ಇಲಾಖೆ ಕೂಡಲೇ ಇವರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

10 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

14 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

22 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

50 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

1 hour ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

1 hour ago