ಮಂಗಳೂರು: ಮಗು ಮಾರಾಟ ಜಾಲವೊಂದನ್ನು ಭೇದಿಸಿದ ಮಂಗಳೂರು ಪೊಲೀಸರು ಐದು ತಿಂಗಳ ಹೆಣ್ಮಗುವನ್ನು ರಕ್ಷಿಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸ್ ಆಯುಕ್ತ ಶಶಿಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಮುಲ್ಕಿಯ ರೈಹಾನ್ (30) ಎಂಬಾತ ಬಂಧಿತ ಆರೋಪಿಯಾಗಿದ್ದು, ಮಗುವನ್ನು ಮಾರಾಟ ಮಾಡಿದ ಮತ್ತು ಸ್ವೀಕರಿಸಿದವರ ವಿರುದ್ಧ ತನಿಖೆ ನಡೆಸಲಾಗುವುದು ಎಂದರು.
ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದ ಆರೋಪಿ ರೈಹಾನ್ ಮಗುವೊಂದು ಮಾರಾಟಕ್ಕಿವೆ. ಬೇಕಿದ್ದರೆ ತಿಳಿಸಿ ಎಂದಿದ್ದ. ಅಲ್ಲದೆ ತಾನು ಈ ಹಿಂದೆ ಮಗು ಮಾರಾಟ ಮಾಡಿದ್ದೇನೆ. ಗಂಡು ಮಗುವಿಗೆ 6 ಲಕ್ಷ ರೂ.ಮತ್ತು ಹೆಣ್ಣು ಮಗುವಿಗೆ 4 ಲಕ್ಷ ರೂ. ನೀಡಬೇಕು. ಮುಂಗಡ ಹಣ ನೀಡಿದ ಒಂದುವರೆ ತಿಂಗಳೊಳಗೆ ಮಗುವನ್ನು ಕೊಡುವುದಾಗಿ ತಿಳಿಸಿದ್ದ. ಅದರಂತೆ ಒಡನಾಡಿ ಸಂಸ್ಥೆಯ ಸಿದ್ದಾರ್ಥ್ ಮತ್ತು ದೀಕ್ಷಿತ್ ಎಂಬವರು ಮಂಗಳೂರಿಗೆ ಆಗಮಿಸಿ ರೈಹಾನ್ನನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಅದರಂತೆ ಪಾಂಡೇಶ್ವರ ಎಸ್ಸೈ ಶೀತಲ್ ನೇತೃತ್ವದಲ್ಲಿ ಪೊಲೀಸ್ ತಂಡವನ್ನೂ ರಚಿಸಲಾಗುತ್ತದೆ. ಹಾಗೇ ಆರೋಪಿ ರೈಹಾನ್ನನ್ನು ಸಂಪರ್ಕಿಸಿ ಮಾತುಕತೆಗೆ ಕರೆದು ಬಳಿಕ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24
ಆರೋಪಿ ಈ ಹಿಂದೆಯೂ ಹಲವು ಮಕ್ಕಳನ್ನು ಮಾರಾಟ ಮಾಡಿದ್ದಾನೆ ಎನ್ನಲಾಗಿದೆ. ಮುಲ್ಕಿಯಲ್ಲಿ ಕೋಳಿ ಮಾರಾಟದ ಅಂಗಡಿ, ಫ್ಯಾನ್ಸಿ ನಡೆಸುತ್ತಿದ್ದ ಈತ ಅದರ ಮಧ್ಯೆ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಹಾಸನದ ದಂಪತಿಯಿಂದ ಹೆಣ್ಮಗುವನ್ನು 3 ಲಕ್ಷಕ್ಕೆ ಪಡೆದ ಈತ ಕಾರ್ಕಳ ಮೂಲದ ಕವಿತಾ ಎಂಬವರಿಗೆ 6 ಲಕ್ಷ ರೂ,ಗೆ ಮಾರಾಟ ಮಾಡಿದ್ದಾನೆ. ಇದೀಗ ಮಗುವನ್ನು ರಕ್ಷಿಸಲಾಗಿದೆ. ಮಗು ಮಾರಾಟ ಮಾಡಿದ ಮತ್ತು ಮಗುವನ್ನು ಪಡೆದವರನ್ನು ವಿಚಾರಣೆ ನಡೆಸಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಉಡುಪಿಯ MGM ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಪುಸ್ತಕೋತ್ಸವ -Vishwanews24
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…