ಮಂಗಳೂರು: ಮಗು ಮಾರಾಟ ಜಾಲವೊಂದನ್ನು ಭೇದಿಸಿದ ಮಂಗಳೂರು ಪೊಲೀಸರು ಐದು ತಿಂಗಳ ಹೆಣ್ಮಗುವನ್ನು ರಕ್ಷಿಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸ್ ಆಯುಕ್ತ ಶಶಿಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಮುಲ್ಕಿಯ ರೈಹಾನ್ (30) ಎಂಬಾತ ಬಂಧಿತ ಆರೋಪಿಯಾಗಿದ್ದು, ಮಗುವನ್ನು ಮಾರಾಟ ಮಾಡಿದ ಮತ್ತು ಸ್ವೀಕರಿಸಿದವರ ವಿರುದ್ಧ ತನಿಖೆ ನಡೆಸಲಾಗುವುದು ಎಂದರು.
ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದ ಆರೋಪಿ ರೈಹಾನ್ ಮಗುವೊಂದು ಮಾರಾಟಕ್ಕಿವೆ. ಬೇಕಿದ್ದರೆ ತಿಳಿಸಿ ಎಂದಿದ್ದ. ಅಲ್ಲದೆ ತಾನು ಈ ಹಿಂದೆ ಮಗು ಮಾರಾಟ ಮಾಡಿದ್ದೇನೆ. ಗಂಡು ಮಗುವಿಗೆ 6 ಲಕ್ಷ ರೂ.ಮತ್ತು ಹೆಣ್ಣು ಮಗುವಿಗೆ 4 ಲಕ್ಷ ರೂ. ನೀಡಬೇಕು. ಮುಂಗಡ ಹಣ ನೀಡಿದ ಒಂದುವರೆ ತಿಂಗಳೊಳಗೆ ಮಗುವನ್ನು ಕೊಡುವುದಾಗಿ ತಿಳಿಸಿದ್ದ. ಅದರಂತೆ ಒಡನಾಡಿ ಸಂಸ್ಥೆಯ ಸಿದ್ದಾರ್ಥ್ ಮತ್ತು ದೀಕ್ಷಿತ್ ಎಂಬವರು ಮಂಗಳೂರಿಗೆ ಆಗಮಿಸಿ ರೈಹಾನ್ನನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಅದರಂತೆ ಪಾಂಡೇಶ್ವರ ಎಸ್ಸೈ ಶೀತಲ್ ನೇತೃತ್ವದಲ್ಲಿ ಪೊಲೀಸ್ ತಂಡವನ್ನೂ ರಚಿಸಲಾಗುತ್ತದೆ. ಹಾಗೇ ಆರೋಪಿ ರೈಹಾನ್ನನ್ನು ಸಂಪರ್ಕಿಸಿ ಮಾತುಕತೆಗೆ ಕರೆದು ಬಳಿಕ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24
ಆರೋಪಿ ಈ ಹಿಂದೆಯೂ ಹಲವು ಮಕ್ಕಳನ್ನು ಮಾರಾಟ ಮಾಡಿದ್ದಾನೆ ಎನ್ನಲಾಗಿದೆ. ಮುಲ್ಕಿಯಲ್ಲಿ ಕೋಳಿ ಮಾರಾಟದ ಅಂಗಡಿ, ಫ್ಯಾನ್ಸಿ ನಡೆಸುತ್ತಿದ್ದ ಈತ ಅದರ ಮಧ್ಯೆ ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಹಾಸನದ ದಂಪತಿಯಿಂದ ಹೆಣ್ಮಗುವನ್ನು 3 ಲಕ್ಷಕ್ಕೆ ಪಡೆದ ಈತ ಕಾರ್ಕಳ ಮೂಲದ ಕವಿತಾ ಎಂಬವರಿಗೆ 6 ಲಕ್ಷ ರೂ,ಗೆ ಮಾರಾಟ ಮಾಡಿದ್ದಾನೆ. ಇದೀಗ ಮಗುವನ್ನು ರಕ್ಷಿಸಲಾಗಿದೆ. ಮಗು ಮಾರಾಟ ಮಾಡಿದ ಮತ್ತು ಮಗುವನ್ನು ಪಡೆದವರನ್ನು ವಿಚಾರಣೆ ನಡೆಸಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಉಡುಪಿಯ MGM ಕಾಲೇಜಿನಲ್ಲಿ ಇಂದಿನಿಂದ ಎರಡು ದಿನಗಳ ಪುಸ್ತಕೋತ್ಸವ -Vishwanews24
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…