Featured

ಮಂಗಳೂರು  : ನವಜಾತ ಶಿಶುವನ್ನು ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಪೋಷಕರು – Vishwanews24

ಮಂಗಳೂರು  : ನವಜಾತ ಶಿಶುವನ್ನು ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಹೆತ್ತವರು

ಮಂಗಳೂರು : ನವಜಾತ ಶಿಶು ಮಗುವನ್ನು ಹೆತ್ತವರು ರಸ್ತೆಯಲ್ಲೇ ಬಿಟ್ಟು ಹೋದ ಘಟನೆ ಸ್ಟೇಟ್‌ಬ್ಯಾಂಕ್‌ ಸಮೀಪದ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಮಗುವನ್ನು ವೆನ್ಲಾಕ್‌ನ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಂಡು ಮಗು ಇದಾಗಿದ್ದು, ಜನಿಸಿ ಸುಮಾರು 1 ವಾರ ಕಾಲ ಆಗಿದೆ ಎಂದು ಹೇಳಲಾಗಿದ್ದು, ಲೈಟ್ ಕಂಬದ ಬುಡದಲ್ಲಿ ಮಗು ಇರುವುದನ್ನು ನೋಡಿದ ಬಸ್ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗು ಪತ್ತೆಯಾದ ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಗುವನ್ನು ಲೇಡಿಗೋಷನ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ತಪಾಸಣೆ ನಡೆಸಿ ವೆನ್ಲಾಕ್‌ ಗೆ ದಾಖಲಿಸಲಾಗಿದೆ. ಮಗುವಿನ ಆರೋಗ್ಯ ಸ್ಥಿರವಾಗಿರದ ಕಾರಣ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆತ್ತವರು ಬಿಟ್ಟು ಹೋಗಿರುವ ಮಗುವಿನ ಆರೋಗ್ಯದಲ್ಲಿ ಏರುಪೇರು ಇದ್ದು, ತಲೆಯಲ್ಲಿ ಸಣ್ಣ ಪುಟ್ಟ ಗಾಯಗಳಿವೆ. ಪತ್ತೆಯಾದ ವೇಳೆ ಮೂಗಿಗೆ ಟ್ಯೂಬ್‌ ಹಾಕಿದ ಸ್ಥಿತಿಯಲ್ಲಿತ್ತು. ಫಿಟ್ಸ್‌ ಕೂಡಾ ಇರುವುದು ತಿಳಿದು ಬಂದಿದೆ. ಮಧ್ಯಾಹ್ನದ ವೇಳೆ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ಒಬ್ಬ ಗಂಡಸು ಹಾಗೂ ಹೆಂಗಸಿನೊಂದಿಗೆ ಈ ಮಗುವನ್ನು ಸ್ಥಳೀಯರು ನೋಡಿದ್ದು ಮಗುವನ್ನು ಯಾರು ಬಿಟ್ಟು ಹೋಗಿದ್ದಾರೆ ಎನ್ನುವ ಕುರಿತಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

21 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

24 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago