Featured

ಮಂಗಳೂರು : ನಾಗಬನ ಧ್ವಂಸ ಮಾಡಿ ಅಪವಿತ್ರಗೊಳಿಸಿದ ಪ್ರಕರಣ  : 8 ಮಂದಿಯ ಬಂಧನ – Vishwanews24

ಮಂಗಳೂರು : ನಾಗಬನ ಧ್ವಂಸ ಮಾಡಿ ಅಪವಿತ್ರಗೊಳಿಸಿದ ಪ್ರಕರಣ  :  8 ಮಂದಿಯ ಬಂಧನ – Vishwanews24

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಡುಕೋಡಿ ಗ್ರಾಮದ ಬಂಗ್ರ ಕೂಳೂರು ಎಂಬಲ್ಲಿರುವ ಕೋಟ್ಯಾನ್ ಕುಂಟುಂಬದ ನಾಗಬನ ಮತ್ತು ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ಎಂಬಲ್ಲಿರುವ ನಾಗಬನ ದ್ವಂಸ ಮಾಡಿ ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸಫ್ವಾನ್‌ @ಚಿಪ್ಪು (25) ಕಾವೂರು, ಮೊಹಮ್ಮದ್‌ ಸುಹೇಲ್‌ (23) ಕಾವೂರು ಶಾಂತಿನಗರ, ಪ್ರವೀಣ್‌ ಅನಿಲ್‌ ಮೊಂತೆರೋ (27) ಪಂಜಿಮೊಗರು, ನಿಖಿಲೇಶ್‌ @ವಿಕ್ಕಿ (22), ಜಯಂತ (30), ಮಂಜುನಾಥ ಪೂಜಾರಿ (30), ಪ್ರತೀಕ್‌ (24) ಮತ್ತು ನೌಷಾದ್‌ (30) ಎಂದು ಗುರುತಿಸಲಾಗಿದೆ.

ಆರೋಪಿಗಳು ಕೋಮುಗಲಭೆ ಉಂಟುಮಾಡುವ ಉದ್ದೇಶದಿಂದ ಸಮಾಜದಲ್ಲಿ ಶಾಂತಿ ಕೇಡಿಸುವರೇ ದಕ್ಷಿಣ ಭಾರದತ ಪವಿತ್ರ ನಾಗಾರಾಧನೆಯ ನಾಗಬನದ ನಾಗನ ಮೂರ್ತಿಗಳನ್ನು ಅಕ್ಟೋಬರ್‌ 20 ರಿಂದ 23 ರ ಮಧ್ಯೆ ರಾತ್ರಿಕಾಲದಲ್ಲಿ ಕೂಳೂರು ಕೊಟ್ಯಾನ್ ಕುಂಟುಂಬಕ್ಕೆ ಸೇರಿದ ನಾನನದ ನಾಗನ ಒಂದು ಕಲ್ಲನ್ನು ಧ್ವಂಸಗೊಳಿಸಿ ಉಳಿದ 5 ಕಲ್ಲುಗಳನ್ನು ಅಪವಿತ್ರ ಮಾಡಿದ್ದು ಅಲ್ಲದೆ ನವೆಂಬರ್‌ 12ರಂದು ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಕಲ್ ಎಂಬಲ್ಲಿ ರಾತ್ರಿಕಾಲದಲ್ಲಿ ನಾಗಬನದ ಮೂರ್ತಿಯನ್ನು ಕಿತ್ತೆಎಸದು ಅಪವಿತ್ರಗೊಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ಇದರಲ್ಲಿ ಸಹಕರಿಸಿದ ಹಾಗೂ ಆರೋಪಿತರುಗಳಿಗೆ ಆಶ್ರಯ ನೀಡಿದ ಇತರ ವ್ಯಕ್ತಿಗಳನ್ನು ಬಂಧನ ಮಾಡಬೇಕಾಗಿರುತ್ತದೆ.

ಆರೋಪಿತರುಗಳು ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಸಂಚುರೂಪಿಸಿ ಮಾಡಿದ ಕೃತ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಮಾರ್ಗದರ್ಶನಂತೆ, ಈ ಕಾರ್ಯಚರಣೆಯನ್ನು ಡಿ.ಸಿ.ಪಿ. ರವರಾದ ಹರಿರಾಂ ಶಂಕರ್ (ಕಾ&ಸು), ಮತ್ತು ದಿನೇಶ ಕುಮಾರ್‌ (ಆಪರಾಧ ಸಂಚಾರ) ರವರ ನಿರ್ಧೇಶನದಂತೆ ಮಂಗಳೂರು ಉತ್ತರ: ಉಪವಿಭಾಗದ ಎ.ಸಿ.ಪಿ. ಮಹೇಶ ಕುಮಾರ್ ರವರ ನೇತೃತ್ವದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರಾಘವ ಎಸ್ ಪಡೀಲ್ ರವರು ಹಾಗೂ ಸಿಬ್ಬಂದಿಗಳಾದ ಮೂಡುಬಿದ್ರೆ ಠಾಣಾ ಪಿಎಸ್‌ಐ ಸುಧೀಪ್, ಬಜಪೆ ಠಾಣಾ ಪಿ ಎಸ್ ಐ ರಾಘವೇಂದ್ರ ನಾಯ್ಕ, ಕಾವೂರು ಠಾಣಾ ಪಿಎಸ್‌ಐ ಹರೀಶ್ ಹಜ್ , ಎಎಸ್ ಐ, ಕುಶಲಮಣಿಯಾಣಿ, ಪಣಂಬೂರು ಠಾಣಾ ಎಎಸ್‌ಐ ರಾಮಚಂದ್ರ, ಹೆಚ್ : ಇಶಾಕ್, ಕಾವೂರು ಠಾಣ, ಸಿಬ್ಬಂದಿಗಳಾದ ಹೆಚ್ ಸಿ ಮೋಹನದಾಸ್, ಕೊಟ್ಯಾನ್, ಹೆಚ್ ಸಿ ದುರ್ಗಾಪ್ರಧಾದ್‌, ಶೆಟ್ಟಿ, ಹೆಚ್ ಸಿ ಕಿಶೋರ್ ಪೂಜಾರಿ, ತಚ್ ಸಿ ಪ್ರಮೋದ್ ಕೆ ಎಸ್, ಹೆಚ್ ಸಿ ಮೂಡುಬಿದ್ರೆ ಪೊಲೀಸ್ ಠಾಣಾ ಹೆಚ್ ಸಿ ಹುಸೇನ್, ಮಂಗಳೂರು ನಗರ ಕಂಪ್ಯೂಟರ್ ವಿಭಾಗದ ಹೆಚ್ ಸಿ ಮನೋಜ್, ಪಿಸಿ ಶ್ರೀಧರ, ಪಿಸಿ ಸಿಕಂದರ ಚಂಚಲಿ, ಪಿಸಿ ಸುರೇಶ ಕೊಳ್ಳಿ, ಪಿಸಿ ರಾಜೇಸಾಬ, ಪಿಸಿ ಶರಣಪ, ರವರುಗಳೊಂದಿಗೆ ನಡೆಸಿರುತ್ತಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

3 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

3 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

4 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

4 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

4 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

4 hours ago