Featured

ಮಂಗಳೂರು : ನಾಗರಾಧನೆಗೆ ಸ್ವಂತ ಜಮೀನು ದಾನ ಮಾಡಿದ ಸ್ಪೀಕರ್ ಯು.ಟಿ ಖಾದರ್ – Vishwanews24

ಮಂಗಳೂರು : ನಾಗರಾಧನೆಗೆ ಸ್ವಂತ ಜಮೀನು ದಾನ ಮಾಡಿದ ಸ್ಪೀಕರ್ ಯು.ಟಿ ಖಾದರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಅಂದ್ರೇ ಸದಾ ಒಂದಿಲ್ಲೊಂದು ಕೋಮುಗಲಭೆಗಳು ಸಾಮಾನ್ಯ. ಆಗಾಗ ಕೋಮುಗಳ ಗಲಭೆಗಳು ನಡೆಯುತ್ತಲೇ ಇರ್ತಾವೆ. ಈ ನಡುವೆಯೂ ಸ್ಪೀಕರ್ ಯು.ಟಿ ಖಾದರ್ ಮಾತ್ರ ಧಾರ್ಮಿಕ ಸಾಮರಸ್ಯ ಮೆರೆದಿದ್ದಾರೆ. ಅದೇ ನಾಗರಾಧನೆಗೆ ಸ್ವಂತ ಜಮೀನು ದಾನ ಮಾಡಿದ್ದಾರೆ.

ಸ್ಪೀಕರ್ ಯು.ಟಿ ಖಾದರ್ ಅವರು ತಮ್ಮ ಪಿತ್ರಾರ್ಜಿತ ಸೊತ್ತಾಗಿ ಬಂದಿದ್ದಂತ ಜಾಗದಲ್ಲಿ ಹಿಂದೂಗಳು ನಾಗರಕಟ್ಟೆಯನ್ನು ನಿರ್ಮಿಸಿ, ನಾಗಾರಾಧನೆ ಮಾಡಿಕೊಂಡು ಬರ್ತಾ ಇದ್ದರು. ಅಂತಹ ನಾಗಾರಾಧನೆ ಮಾಡುತ್ತಿದ್ದಂತ ಜಾಗವನ್ನೇ ದಾನ ಮಾಡಿ, ದೇವಸ್ಥಾನಕ್ಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕ ಎಂಬಲ್ಲಿ ಯು.ಟಿ ಖಾದರ್ ಅವರು ಜಮೀನನ್ನೇ ದಾನ ಮಾಡಿರೋದಾಗಿದೆ. ಹಿಂದಿನ ಕಾಲದಿಂದಲೂ ಆ ಜಮೀನಿನಲ್ಲಿ ನಾಗಾರಾಧನೆ ನಡೆಯುತ್ತಿತ್ತು. ಹಿಂದೂಗಳ ದಳವಾಯಿ ಕುಟುಂಬಕ್ಕೆ ಸೇರಿದ್ದ ಜಾಗವು, ಭೂ ಮಸೂದೆ ಕಾನೂನಿನ ನಂತ್ರ ಖಾದರ್ ಕುಟುಂಬದ ಹಿರಿಯರಿಗೆ ಬಂದಿತ್ತು.

ಮುಸ್ಲೀಂ ಸಮುದಾಯದಕ್ಕೆ ಜಮೀನು ಹೋದ ನಂತ್ರ, ಮೂಲ ನಾಗಾರಾಧನೆಯ ಸ್ಥಳದಲ್ಲಿ ಪೂಜೆ ಮಾಡದೇ, ಬೇರೆಡೆ ನಾಗಾರಾಧನೆಯಲ್ಲಿ ತೊಡಗಿದ್ದರು. ಆದ್ರೇ ದಳವಾಯಿ ಕುಟುಂಬಕ್ಕೆ ಒಂದಿಲ್ಲೊಂದು ಸಮಸ್ಯೆಗಳು ಕಾಡತೊಡಗಿದ್ದವು. ಆಗ ಅಷ್ಟಮಂಗಲ ಪ್ರಶ್ನೆ ಕೇಳಿದಾಗ ಮೂಲ ಜಾಗದಲ್ಲೇ ನಾಗಾರಾಧನೆ ಮಾಡುವಂತೆ ಉತ್ತರ ಸಿಕ್ಕಿತ್ತು.

ಈ ಬಳಿಕ ಯು.ಟಿ ಖಾದರ್ ಅವರನ್ನು ಭೇಟಿಯಾಗಿದ್ದಂತ ದಳವಾಯಿ ಕುಟುಂಬ, ಮೂಲ ನಾಗಾರಾಧನೆ ಬಿಟ್ಟನಂತ್ರ ತಮಗೆ ಆದಂತ ಸಮಸ್ಯೆ ವಿವರಿಸಿದ್ದರು. ಅಲ್ಲದೇ ನಾಗರಕಟ್ಟೆ ಇರುವಂತ 10 ಸೆಂಟ್ಸ್ ಸ್ಥಳವನ್ನು ಖರೀದಿಗಾದರೂ ಕೊಡಿ. ನಾಗಾರಾಧನೆ ಮುಂದುವರೆಸಿಕೊಂಡು ಹೋಗಲಿದ್ದೇವೆ ಎಂಬುದಾಗಿ ಮನವಿ ಮಾಡಿದ್ದಾರೆ.

ಅವರ ಮನವಿಗೆ ಕೂಡಲೇ ಪ್ರತಿ ಸ್ಪಂದಿಸಿದಂತ ಸ್ಪೀಕರ್ ಯು.ಟಿ ಖಾದರ್ ಅವರು 10 ಸೆಂಟ್ಸ್ ಕೇಳಿದ ಜಮೀನಿನ ಜೊತೆಗೆ 10 ಸೆಂಟ್ಸ್ ಜಮೀನು ಸೇರಿಸಿ ಒಟ್ಟು 20 ಸೆಂಟ್ಸ್ ನಾಗಾರಾಧನೆಯ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ದಾನವಾಗಿ ನೀಡಿದ್ದಾರೆ. ಈ ಮೂಲಕ ಮುಸ್ಲೀಂ ಸಮುದಾಯಕ್ಕೆ ಸೇರಿದ 12 ಎಕರೆ ಜಮೀನಿನ ಮಧ್ಯದಲ್ಲೇ ನಾಗಾರಾಧನೆ ನಡೆಸೋದಕ್ಕೆ ಜಮೀನು ದಾನ ನೀಡಿ, ಧಾರ್ಮಿಕ ಸಾಮರಸ್ಯತೆಯನ್ನು ಸ್ಪೀಕರ್ ಯು.ಟಿ ಖಾದರ್ ಮೆರೆದಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago