Featured

ಮಂಗಳೂರು : ನಾಗರಾಧನೆಗೆ ಸ್ವಂತ ಜಮೀನು ದಾನ ಮಾಡಿದ ಸ್ಪೀಕರ್ ಯು.ಟಿ ಖಾದರ್ – Vishwanews24

ಮಂಗಳೂರು : ನಾಗರಾಧನೆಗೆ ಸ್ವಂತ ಜಮೀನು ದಾನ ಮಾಡಿದ ಸ್ಪೀಕರ್ ಯು.ಟಿ ಖಾದರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಅಂದ್ರೇ ಸದಾ ಒಂದಿಲ್ಲೊಂದು ಕೋಮುಗಲಭೆಗಳು ಸಾಮಾನ್ಯ. ಆಗಾಗ ಕೋಮುಗಳ ಗಲಭೆಗಳು ನಡೆಯುತ್ತಲೇ ಇರ್ತಾವೆ. ಈ ನಡುವೆಯೂ ಸ್ಪೀಕರ್ ಯು.ಟಿ ಖಾದರ್ ಮಾತ್ರ ಧಾರ್ಮಿಕ ಸಾಮರಸ್ಯ ಮೆರೆದಿದ್ದಾರೆ. ಅದೇ ನಾಗರಾಧನೆಗೆ ಸ್ವಂತ ಜಮೀನು ದಾನ ಮಾಡಿದ್ದಾರೆ.

ಸ್ಪೀಕರ್ ಯು.ಟಿ ಖಾದರ್ ಅವರು ತಮ್ಮ ಪಿತ್ರಾರ್ಜಿತ ಸೊತ್ತಾಗಿ ಬಂದಿದ್ದಂತ ಜಾಗದಲ್ಲಿ ಹಿಂದೂಗಳು ನಾಗರಕಟ್ಟೆಯನ್ನು ನಿರ್ಮಿಸಿ, ನಾಗಾರಾಧನೆ ಮಾಡಿಕೊಂಡು ಬರ್ತಾ ಇದ್ದರು. ಅಂತಹ ನಾಗಾರಾಧನೆ ಮಾಡುತ್ತಿದ್ದಂತ ಜಾಗವನ್ನೇ ದಾನ ಮಾಡಿ, ದೇವಸ್ಥಾನಕ್ಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕ ಎಂಬಲ್ಲಿ ಯು.ಟಿ ಖಾದರ್ ಅವರು ಜಮೀನನ್ನೇ ದಾನ ಮಾಡಿರೋದಾಗಿದೆ. ಹಿಂದಿನ ಕಾಲದಿಂದಲೂ ಆ ಜಮೀನಿನಲ್ಲಿ ನಾಗಾರಾಧನೆ ನಡೆಯುತ್ತಿತ್ತು. ಹಿಂದೂಗಳ ದಳವಾಯಿ ಕುಟುಂಬಕ್ಕೆ ಸೇರಿದ್ದ ಜಾಗವು, ಭೂ ಮಸೂದೆ ಕಾನೂನಿನ ನಂತ್ರ ಖಾದರ್ ಕುಟುಂಬದ ಹಿರಿಯರಿಗೆ ಬಂದಿತ್ತು.

ಮುಸ್ಲೀಂ ಸಮುದಾಯದಕ್ಕೆ ಜಮೀನು ಹೋದ ನಂತ್ರ, ಮೂಲ ನಾಗಾರಾಧನೆಯ ಸ್ಥಳದಲ್ಲಿ ಪೂಜೆ ಮಾಡದೇ, ಬೇರೆಡೆ ನಾಗಾರಾಧನೆಯಲ್ಲಿ ತೊಡಗಿದ್ದರು. ಆದ್ರೇ ದಳವಾಯಿ ಕುಟುಂಬಕ್ಕೆ ಒಂದಿಲ್ಲೊಂದು ಸಮಸ್ಯೆಗಳು ಕಾಡತೊಡಗಿದ್ದವು. ಆಗ ಅಷ್ಟಮಂಗಲ ಪ್ರಶ್ನೆ ಕೇಳಿದಾಗ ಮೂಲ ಜಾಗದಲ್ಲೇ ನಾಗಾರಾಧನೆ ಮಾಡುವಂತೆ ಉತ್ತರ ಸಿಕ್ಕಿತ್ತು.

ಈ ಬಳಿಕ ಯು.ಟಿ ಖಾದರ್ ಅವರನ್ನು ಭೇಟಿಯಾಗಿದ್ದಂತ ದಳವಾಯಿ ಕುಟುಂಬ, ಮೂಲ ನಾಗಾರಾಧನೆ ಬಿಟ್ಟನಂತ್ರ ತಮಗೆ ಆದಂತ ಸಮಸ್ಯೆ ವಿವರಿಸಿದ್ದರು. ಅಲ್ಲದೇ ನಾಗರಕಟ್ಟೆ ಇರುವಂತ 10 ಸೆಂಟ್ಸ್ ಸ್ಥಳವನ್ನು ಖರೀದಿಗಾದರೂ ಕೊಡಿ. ನಾಗಾರಾಧನೆ ಮುಂದುವರೆಸಿಕೊಂಡು ಹೋಗಲಿದ್ದೇವೆ ಎಂಬುದಾಗಿ ಮನವಿ ಮಾಡಿದ್ದಾರೆ.

ಅವರ ಮನವಿಗೆ ಕೂಡಲೇ ಪ್ರತಿ ಸ್ಪಂದಿಸಿದಂತ ಸ್ಪೀಕರ್ ಯು.ಟಿ ಖಾದರ್ ಅವರು 10 ಸೆಂಟ್ಸ್ ಕೇಳಿದ ಜಮೀನಿನ ಜೊತೆಗೆ 10 ಸೆಂಟ್ಸ್ ಜಮೀನು ಸೇರಿಸಿ ಒಟ್ಟು 20 ಸೆಂಟ್ಸ್ ನಾಗಾರಾಧನೆಯ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ದಾನವಾಗಿ ನೀಡಿದ್ದಾರೆ. ಈ ಮೂಲಕ ಮುಸ್ಲೀಂ ಸಮುದಾಯಕ್ಕೆ ಸೇರಿದ 12 ಎಕರೆ ಜಮೀನಿನ ಮಧ್ಯದಲ್ಲೇ ನಾಗಾರಾಧನೆ ನಡೆಸೋದಕ್ಕೆ ಜಮೀನು ದಾನ ನೀಡಿ, ಧಾರ್ಮಿಕ ಸಾಮರಸ್ಯತೆಯನ್ನು ಸ್ಪೀಕರ್ ಯು.ಟಿ ಖಾದರ್ ಮೆರೆದಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

47 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

1 hour ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

1 hour ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

2 hours ago