ಮಂಗಳೂರು : ನಾಡದೋಣಿ ಮೀನುಗಾರರಿಗೆ ಔಟ್ಬೋರ್ಡ್ ಎಂಜಿನ್ ಖರೀದಿಗೆ ಸಿಗುತ್ತಿದ್ದ 60 ಸಾವಿರ ರೂ. ಸಹಾಯಧನ ಕೈ ತಪ್ಪಿದೆ.ನಾಡದೋಣಿ ಮೀನುಗಾರರಿಗೆ ಹೊಸ ಎಂಜಿನ್ ಖರೀದಿಸಲು ಸರಕಾರದಿಂದ ಸಿಗುತ್ತಿದ್ದ ಸಹಾಯ ಧನ 2 ವರ್ಷದಿಂದ ಸಿಗುತ್ತಿಲ್ಲ.
ಸಹಾಯಧನ ಮುಂದುವರಿಸಬೇಕೆಂಬ ಮೀನು ಗಾರರ ಬೇಡಿಕೆ ಇನ್ನೂ ಈಡೇರಿಲ್ಲ. ಬಜೆಟ್ ಪೂರ್ವ ಸಭೆಯಲ್ಲಿ ಉಲ್ಲೇ ಖೀಸಿದ್ದು, ಇಲಾ ಖೆಯ ವಿವಿಧ ಸಭೆಗಳಲ್ಲಿ ಚರ್ಚಿಸಿ ದರೂ ಉಪಯೋಗವಾಗಿಲ್ಲ. ದ.ಕ. ಜಿಲ್ಲೆಯಲ್ಲಿ 2,000 ಕ್ಕೂ ಹೆಚ್ಚು ಹಾಗೂ ಉಡುಪಿ ಜಿಲ್ಲೆಯಲ್ಲಿ 3,000ಕ್ಕೂ ಹೆಚ್ಚು ನಾಡ ದೋಣಿಗಳಿವೆ.
ಉಡುಪಿ : ತಾಯಿ ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ಬಾಕಿ ವೇತನ 3.68 ಕೋಟಿ ರೂ. ಬಿಡುಗಡೆ – Vishwanews24
ಕೈ ಬಿಟ್ಟದ್ದು ಯಾಕೆ?
ಮೀನುಗಾರಿಕೆ ಇಲಾಖೆಯ ಅಧಿಕಾ ರಿಗಳ ಪ್ರಕಾರ “ಕೇಂದ್ರ ಪುರಸ್ಕೃತ ನೀಲಿ ಕ್ರಾಂತಿ ಯೋಜನೆಯು 2019- 20ಕ್ಕೆ ಮುಗಿದಿದೆ. 2020- 21ನೇ ಸಾಲಿನಿಂದ ಕೇಂದ್ರದ “ಪಿಎಂಎಂಎಸ್ವೈ’ ಯೋಜನೆ ಜಾರಿಗೆ ಬಂದಿದ್ದು, ಅದರಲ್ಲಿ ನಾಡದೋಣಿ ಔಟ್ಬೋ ರ್ಡ್ ಎಂಜಿನ್ಗೆ ಸಹಾಯಧನ ನೀಡಲು ಅವಕಾಶವಿಲ್ಲ ಎನ್ನುತ್ತಾರೆ ಅಧಿಕಾರಿಗಳು.
ಕಾಯುತ್ತಿವೆ ಅರ್ಜಿಗಳು
ನಾಡದೋಣಿ ಔಟ್ಬೋರ್ಡ್ ಎಂಜಿನ್ ಖರೀದಿಗೆ 1.40 ಲಕ್ಷ ರೂ. ತಗಲುತ್ತದೆ. ಅದಕ್ಕೆ 60 ಸಾವಿರ ರೂ. ಸಹಾಯ ಧನ ಸಿಗುತ್ತಿತ್ತು. ಸುದೀರ್ಘ ವರ್ಷ ದಿಂದ ಜಾರಿಯಲ್ಲಿದ್ದ ಯೋಜನೆ ಈಗ ಇಲ್ಲ. ಆದರೆ ಮೀನುಗಾರರು ನಿರೀಕ್ಷೆಯಿಂದ ಅರ್ಜಿ ಹಾಕುತ್ತಲೇ ಇದ್ದಾರೆ. ಸಹಾಯ ಧನ ಮಾತ್ರ ಸಿಗುತ್ತಿಲ್ಲ’ ಎನ್ನುತ್ತಾರೆ ಕರಾವಳಿ ನಾಡದೋಣಿ ಮೀನುಗಾರರ ಸಂಘ, ನವ ಮಂಗಳೂರು ವಲಯ ಅಧ್ಯಕ್ಷ ವಾಸುದೇವ ಬಿ. ಕರ್ಕೇರ.
ಕುಂದಾಪುರ : ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನದ ರಕ್ಷಣೆ – Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…