ಮಂಗಳೂರು : ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ.ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು.
ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ.
ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು ಎಂದು ಹೇಳಿದರು.
ತೆಲಂಗಾಣ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮುಸ್ಲಿಂ ಸ್ಪೀಕರ್ ಮುಂದೆ ಬಿಜೆಪಿಯವರು ನಮಸ್ಕಾರ ಸಾಬ್ ಎಂದು ಕೈ ಮುಗಿಯುತ್ತಾರೆ ಎಂದು ಜಮೀರ್ ಅಹಮದ್ ಹೇಳಿದ್ದರು.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…