Featured

ಮಂಗಳೂರು: ನಾನು ಎಲ್ಲರ ಸ್ಪೀಕರ್ ; ‘ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮದಿಂದ ನೋಡುವಂತಿಲ್ಲ : ಜಮೀರ್‌ ಹೇಳಿಕೆಗೆ ಯು.ಟಿ.ಖಾದರ್‌ ಅಕ್ಷೇಪ – vishwanews24

ಮಂಗಳೂರು: ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ : ಜಮೀರ್‌ ಹೇಳಿಕೆಗೆ ಯು.ಟಿ.ಖಾದರ್‌ ಅಕ್ಷೇಪ

ಮಂಗಳೂರು : ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ.ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು.

ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ.

ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು ಎಂದು ಹೇಳಿದರು.

ತೆಲಂಗಾಣ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮುಸ್ಲಿಂ ಸ್ಪೀಕರ್ ಮುಂದೆ ಬಿಜೆಪಿಯವರು ನಮಸ್ಕಾರ ಸಾಬ್ ಎಂದು ಕೈ ಮುಗಿಯುತ್ತಾರೆ ಎಂದು ಜಮೀರ್ ಅಹಮದ್ ಹೇಳಿದ್ದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

31 minutes ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

50 minutes ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

56 minutes ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

1 hour ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

1 hour ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

3 hours ago