ಮಂಗಳೂರು : ನಾನು ಎಲ್ಲರ ಸ್ಪೀಕರ್. ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಸ್ಪೀಕರ್ ಯು.ಟಿ ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಕೂಡ ಮೆಟ್ಟಿ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನ ಇದಾಗಿದೆ.ನನಗೆ ಗೌರವ ಕೊಡುವುದು ಯು.ಟಿ ಖಾದರ್ ಗೆ ಗೌರವ ಕೊಡೋದು ಅಲ್ಲ. ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಹಾಗೂ ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು.
ನಾನು ಯಾರ ಹೇಳಿಕೆಗೂ ಕಮೆಂಟ್ ಮಾಡೋದಿಲ್ಲ. ನನ್ನನ್ನು ಜಾತಿ, ಧರ್ಮದ ಆಧಾರದಲ್ಲಿ ಯಾರು ಸಹ ಆ ಪೀಠದಲ್ಲಿ ಕೂರಿಸಿಲ್ಲ. ಅರ್ಹತೆಗೆ ಅನುಗುಣವಾಗಿ ಸಂವಿಧಾನ ಬದ್ಧವಾಗಿ ಕೆಲಸ ನಿರ್ವಹಿಸುವ ವಿಶ್ವಾಸದಿಂದ ಕೂರಿಸಿದ್ದಾರೆ.
ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು ಎಂದು ಹೇಳಿದರು.
ತೆಲಂಗಾಣ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮುಸ್ಲಿಂ ಸ್ಪೀಕರ್ ಮುಂದೆ ಬಿಜೆಪಿಯವರು ನಮಸ್ಕಾರ ಸಾಬ್ ಎಂದು ಕೈ ಮುಗಿಯುತ್ತಾರೆ ಎಂದು ಜಮೀರ್ ಅಹಮದ್ ಹೇಳಿದ್ದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…