ಮಂಗಳೂರು: ಮಂಗಳೂರು ಕ್ಷೇತ್ರದಲ್ಲಿ ಸರ್ವಧರ್ಮದ ಜನರು ಸೌಹಾರ್ದದಿಂದ ವಾಸವಾಗಿದ್ದಾರೆ. ಕೆಲವು ಯುವಕರಿಂದಾಗಿ ಕ್ಷೇತ್ರಕ್ಕೆ ಕೆಟ್ಟ ಹೆಸರು ಬಂದಿದೆ. ಬೋಳಿಯಾರ್ ನಡೆದ ಘಟನೆಯ ಬಳಿಕ ಸ್ಥಳೀಯರೆ ಮುಂದೆ ನಿಂತು ಅಲ್ಲಿ ಸೌಹಾರ್ದ ನೆಲೆಸುವಂತೆ ಮಾಡಿದ್ದಾರೆ. ಹೊರಗಿನವರು ಅಲ್ಲಿಗೆ ಹೋಗಿ ಶಾಂತಿ ಕೆಡಿಸುವ ಕೆಲಸ ಮಾಡುವುದು ಬೇಡ ಎಂದು ಕ್ಷೇತ್ರದ ಶಾಸಕ, ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣ ಮಾಡದೆ ಎಲ್ಲರೂ ನೆಮ್ಮದಿಯಿಂದ ಇರಲು ಅವಕಾಶ ಮಾಡಿಕೊಡಬೇಕು. ಕ್ಷೇತ್ರದ ಶೇ.99ರಷ್ಟು ಒಳ್ಳೆಯವರನ್ನು ನೋಡುವ ಜವಾಬ್ದಾರಿ ನನ್ನದು. ಉಳಿದ ಶೇ.1ರಷ್ಟು ಸಮಸ್ಯೆ ಸೃಷ್ಟಿಸುವವರನ್ನು ಪೊಲೀಸರು ನೋಡಿಕೊಳ್ಳುತ್ತಾರೆ. ಆಸ್ಪತ್ರೆಯಲ್ಲಿದ್ದವರು ಒಳ್ಳೆಯವರಾಗಿದ್ದರೆ ಹೋಗಿ ನೋಡುತ್ತಿದೆ. ಸಮಸ್ಯೆ ಸೃಷ್ಟಿಸುವವರನ್ನು ಹೋಗಿ ಸಂತೈಸುವ ಅಗತ್ಯ ಇಲ್ಲ ಎಂದರು.
ಕ್ಷೇತ್ರದ ಶಾಸಕರು ಕಾಣೆಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಯಾರೋ ಹರಿಯ ಬಿಟ್ಟಿದ್ದಾರೆ. ಯಾರು ಹಾಕಿದ್ದಾರೆ ಎಂದು ಹೇಳಿದರೆ ನಾನೇ ಅವರಿಗೆ ಐದು ಸಾವಿರ ರೂ. ಕೊಡುತ್ತೇನೆ. ನಾನು ಒಳ್ಳೆಯವರಿಗೆ ಕಾಣುತ್ತೇನೆ. ಸಮಾಜ ವಿರೋಧಿಗಳಿಗೆ ಕಾಣುವುದಿಲ್ಲ ಎಂದು ಖಾದರ್ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…