Featured

ಮಂಗಳೂರು: ‘ನಾನು ಪ್ರಚಾರದ ಹಿಂದೆ ಹೋದವನಲ್ಲ , ಪಕ್ಷದ ತೀರ್ಮಾನಕ್ಕೆ ಸಾಯುವವರೆಗೆ ಬದ್ಧ : ನಳಿನ್ ಕುಮಾರ್ ಕಟೀಲ್ – vishwanews24

ಮಂಗಳೂರು: ಸಂಘದ ಪ್ರಚಾರಕ್ಕೆ ಮನೆ ಬಿಟ್ಟವ, ಇಂಥ ಜವಾಬ್ದಾರಿ ಕೊಡಿ ಅಂತ ನಾನು ಯಾವತ್ತೂ ಕೇಳಲೇ ಇಲ್ಲ :ನಳಿನ್

ಮಂಗಳೂರು: ನಾನು ಪ್ರಚಾರದ ಹಿಂದೆ ಹೋದವ ಅಲ್ಲ, ನನ್ನ ಕಾರ್ಯವನ್ನ ಗುರುತಿಸಬೇಕು. ಸಾಮಾಜಿಕ ತಾಣಗಳಲ್ಲಿ ನನ್ನ ಬಗ್ಗೆ ಬಹಳ ಚರ್ಚೆಯಾಯ್ತು. ಆದರೆ ನನ್ನ ಕಾರ್ಯಗಳ ಬಗ್ಗೆ ನನ್ನ ಬಳಿ ಅಧಿಕೃತ ಸರ್ಕಾರಿ ಅಂಕಿ ಅಂಶಗಳಿವೆ. ಅಭಿವೃದ್ಧಿ ಆಗಿಲ್ಲ ಅನ್ನೋ ಚರ್ಚೆಗೆ ನಾನು ಉತ್ತರ ಕೊಡಲು ಹೋಗಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಪಂಪ್ ವೆಲ್, ನಂತೂರು ವಿಚಾರಗಳು ನ್ಯಾಯಾಲಯದಲ್ಲಿದ್ದ ಸಮಸ್ಯೆಗಳು. ಈ ವಿಚಾರದಲ್ಲಿ ನಾನು ಮಾತನಾಡಲು ಆಗಲ್ಲ, ಹಾಗಾಗಿ ಸುಮ್ಮನಿದ್ದೆ. ಸಾಮಾನ್ಯ ಕಾರ್ಯಕರ್ತನಾದ ನಾನು ನನ್ನ ಇತಿಮಿತಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರ್ಶ ಗ್ರಾಮದಲ್ಲಿ ನಮ್ಮ ಜಿಲ್ಲೆ ಇಡೀ ದೇಶಕ್ಕೆ ಮಾದರಿ ಆಗಿದೆ. ನಾನು ಮೊದಲ ಬಾರಿ ಎಂಪಿ ಆದಾಗ ಕರೆದು ಟಿಕೆಟ್ ಕೊಟ್ಟರು. ಬೇಡ ಅಂತ ನಾಲ್ಕು ದಿನ ಮೊಬೈಲ್ ಆಫ್ ಮಾಡಿ ಹೋಗಿದ್ದೆ. ಆದರೆ ಆ ಬಳಿಕ ನಾನು ಸಂಘದ ತೀರ್ಮಾನಕ್ಕೆ ಬದ್ದನಾಗಿ ಒಪ್ಪಿಕೊಂಡೆ. ಈಗ ಸಂಘ ಸಾಕು ಅಂದಾಗ ಒಪ್ಪಿಕೊಂಡಿದ್ದೇನೆ. ನಾನು ರಾಜಕೀಯವಾಗಿ ಇದ್ದವನಲ್ಲ, ಸಂಘದ ಪ್ರಚಾರಕ್ಕೆ ಮನೆ ಬಿಟ್ಟವ. ಇಂಥ ಜವಾಬ್ದಾರಿ ಕೊಡಿ ಅಂತ ನಾನು ಯಾವತ್ತೂ ಕೇಳಲೇ ಇಲ್ಲ. ನಾನು ಪಕ್ಷದ ತೀರ್ಮಾನಕ್ಕೆ ಸಾಯುವವರೆಗೆ ಬದ್ಧ ಎಂದು ತಿಳಿಸಿದರು.

ರಾಜ್ಯಾಧ್ಯಕ್ಷ ಹುದ್ದೆಗೂ ನನಗೆ ರಾತ್ರಿ 2 ಗಂಟೆಗೆ ಅಮಿತ್ ಶಾ ಕರೆ ಮಾಡಿ ಹೇಳಿದ್ರು. ಒಂದು ದಿನ ಬಂದು ಮಾತನಾಡ್ತೇನೆ ಅಂದಾಗಲೂ ಒಪ್ಪದೇ ಪಕ್ಷದ ತೀರ್ಮಾನ ಅಂದ್ರು. ಪಕ್ಷ ಬೆಳೆದಾಗ ನಾವು ಅವಕಾಶಕ್ಕಾಗಿ ಕಾಯಲೇ ಬೇಕು. ಸಾಮಾಜಿಕ ನ್ಯಾಯ, ಚರ್ಚೆಗಳು ಬಂದಾಗ ಒತ್ತಡಗಳು ಇರುತ್ತೆ. ನಾನು ರಾಜ್ಯಾಧ್ಯಕ್ಷನಾಗಿದ್ದಾಗಲೂ ನನಗೆ ಎಲ್ಲರಿಗೆ ಟಿಕೆಟ್ ಕೊಡಿಸಲು ಆಗಿಲ್ಲ. ಅದರೆ ಸಿದ್ದಾಂತ, ತತ್ವ ಅನ್ನೋದು ನಮ್ಮ ಹೃದಯದಲ್ಲಿ ಇರಬೇಕು. ಮುಂದಿನ ಬಿಜೆಪಿ ಸಂಸದರಿಗೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ. ಯಾವುದೇ ಸಂಧರ್ಭದಲ್ಲಿ ನಾನು ಯಾರೇ ಎಂಪಿ ಆದ್ರೂ ಸಹಕಾರ ಕೊಡ್ತೇನೆ. ನಾನು ಧಾರ್ಮಿಕ ಕ್ಷೇತ್ರದಿಂದ ಬಂದವ, ದಾಸರ ವಾಣಿಯಂತೆ ನಿಂದಕರಿರಬೇಕು. ಆದರೆ ನಿಂದನೆಯಲ್ಲಿ ವೈಯಕ್ತಿಕ ದ್ವೇಷ ಇರಬಾರದು. ಒಬ್ಬ ಪರ್ಮನೆಂಟ್ ಆಗಿ ಬೈತಾ ಇದಾನೆ ಅಂದ್ರೆ ಅವನಿಗೆ ವೈಯಕ್ತಿಕ ದ್ವೇಷ ಇರಬೇಕು. ಅಂಥದ್ದನ್ನ ನಾನು ಆದಷ್ಟು ತಲೆಗೆ ತೆಗೆದುಕೊಂಡಿಲ್ಲ. ಪಂಪ್ ವೆಲ್ ವಿಚಾರದಲ್ಲಿ ಕೆಲವರು ಒಳ್ಳೆಯ ನಿಂದನೆ ಮಾಡಿದ್ದಾರೆ, ಸ್ವೀಕರಿಸಿದ್ದೇನೆ. ಇನ್ನು ಕೆಲವರು ವೈಯಕ್ತಿಕವಾಗಿ ಮಾಡಿದ್ದಾರೆ, ಅಂಥವರನ್ನ ನಾನು ತಿರಸ್ಕಾರ ಮಾಡಿದ್ದೇನೆ ಎಂದರು.

ಲೋಕಸಭಾ ಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ವಿಚಾರವಾಗಿ ಮಾತನಾಡಿದ ಅವರು, ಮೊದಲು ಎಂಪಿ ಆದಾಗ ನಾನು ಸಂಘಟನೆಯ ಕಾರ್ಯದರ್ಶಿ ಆಗಿದ್ದೆ. ಆ ಸಂದರ್ಭದಲ್ಲಿ ಹೇಳಿದ್ದೆ ನೀವು ವಾಪಾಸ್ಸು ಹೋಗು ಎಂದಾಗ ಹೋಗ್ತೆನೆ. ಈಗ ಹದಿನೈದು ವರ್ಷದ ಬಳಿಕ ಹೋಗಲು ಹೇಳಿದ್ದಾರೆ ಬಂದಿದ್ದೇನೆ. ಇನ್ನು ಕೋವಿಡ್ ಸಂಧರ್ಭದಲ್ಲಿ ಮಂಗಳೂರು ವೆಲ್‌ಲಾಕ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಮಸ್ಯೆ ಇತ್ತು. ಕೇವಲ 13 ವೆಂಟಿಲೇಟರ್ ಮಂಗಳೂರಿನ ವೆಲ್‌ಲಾಕ್ ಆಸ್ಪತ್ರೆಯಲ್ಲಿತ್ತು. ಈ ಸಂಧರ್ಭದಲ್ಲಿ 2 ಕೋಟಿ ರೂಪಾಯಿಯನ್ನು ಅನುದಾನದಲ್ಲಿ ನೀಡಿದ್ದೆ ಎಂದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago