Featured

ಮಂಗಳೂರು : ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ: ದೇವದಾಸ್ ಕಾಪಿಕಾಡ್ ಸ್ಪಷ್ಟನೆ – vishwanews24

ಮಂಗಳೂರು : ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ: ದೇವದಾಸ್ ಕಾಪಿಕಾಡ್ ಸ್ಪಷ್ಟನೆ

ಮಂಗಳೂರು : ಬಿಜೆಪಿ ಸದಸ್ಯತ್ವ ಬಗ್ಗೆ ತುಳುನಾಡ ಕಲಾವಿದ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದು ಈ ಬಗ್ಗೆ ಮಾತನಾಡಿದ ಆಡಿಯೋ ಒಂದು ವೈರಲ್ ಆಗಿದೆ.

‘ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ ನಾನು ಸೇರ್ಪಡೆಯಾಗಿಲ್ಲ, ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ, ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ’ ಎಂಬ ಸ್ಪಷ್ಟನೆ ಆಡಿಯೋದಲ್ಲಿ ಇದೆ. ‘ಬಿಜೆಪಿ ನಾಯಕರು ಕರೆಮಾಡಿ ನಿಮ್ಮ ಮನೆಗೆ ಬರುತ್ತೇವೆ ಎಂದಾಗ ಬನ್ನಿ ಎಂದು ಹೇಳಿದ್ದೆ. ಕೇವಲ ಸೌಹಾರ್ದ ಭೇಟಿಗಾಗಿ ಮಾತ್ರ ಬನ್ನಿ, ಬೇರೆ ಯಾವುದೇ ತಪ್ಪು ಸಂದೇಶ ಹೋಗಬಾರದು ಅಂತ ನಾನು ಮೊದಲೇ ಬಿಜೆಪಿ ನಾಯಕರಿಗೆ ತಿಳಿಸಿದ್ದೆ, ಅದರಂತೆ ಡಿ.ವಿ ಸದಾನಂದ ಗೌಡ ಜೊತೆ ಕೆಲ ಬಿಜೆಪಿ ಮುಖಂಡರು ನನ್ನ ಮನೆಗೆ ಬಂದು ಭೇಟಿ ಮಾಡಿ ಹೋಗಿದ್ದಾರೆ.

ಆದರೆ ಬಂದುಹೋದ ಮೇಲೆ ನಾನು ಬಿಜೆಪಿ ಸದಸ್ಯತ್ವ ಪಡೆದಿದ್ದೇನೆ ಎಂದು ಅದರಲ್ಲಿದ್ದ ಯಾರೋ ತಪ್ಪು ಸಂದೇಶ ನೀಡಿದ್ದಾರೆ, ಆದರೆ ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ’ ಎಂದು ಹೇಳಿದರು. ‘ನಾನೊಬ್ಬ ಕಲಾವಿದ, ಎಲ್ಲಾ ಜಾತಿ ಮತ ಧರ್ಮಗಳ ಜನರು ನನ್ನ ಅಭಿಮಾನಿಗಳಾಗಿದ್ದು ನನ್ನನ್ನು ಪ್ರೀತಿ ಮಾಡುತ್ತಾರೆ, ನನಗೆ ಯಾವ ಪಕ್ಷವೂ ಬೇಕಿಲ್ಲ, ಎಲ್ಲಾ ಪಕ್ಷಗಳ ನಾಯಕರ ಜೊತೆಗೂ ನನಗೆ ಭಾಂದವ್ಯ ಇದೆ, ರಮಾನಾಥ ರೈ, ಯು.ಟಿ ಖಾದರ್, ನಳಿನ್ ಕುಮಾರ್ ಕಟೀಲ್ ನನಗೆ ಒಳ್ಳೆಯ ಸ್ನೇಹಿತರು’ ಎಂದಿದ್ದಾರೆ. ನನ್ನ ಮನೆಗೆ ಯಾವ ಪಕ್ಷದ ನಾಯಕರು ಬಂದರೂ ಸ್ವಾಗತಿಸಿ ಆತಿಥ್ಯ ನೀಡಿ ಫೋಟೋ ತೆಗಿಸಿಕೊಳ್ಳುತ್ತೇನೆ’ ಎಂದಿದ್ದಾರೆ.

ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯು ತನ್ನ ಅಧಿಕೃತ ಫೇಸ್ ಬುಕ್ ಪೇಜ್ , ಟ್ವಿಟರ್ ನಲ್ಲಿ ಮಾಹಿತಿ ನೀಡಿತ್ತು. ಬಿಜೆಪಿ ನಾಯಕರು ದೇವದಾಸ್ ಕಾಪಿಕಾಡ್ ಅವರನ್ನು ಭೇಟಿಯಾಗಿರುವ ಫೋಟೋ ಸಮೇತ ಪೋಸ್ಟ್ ಮಾಡಿದ್ದರು. ಆ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಬಾಯ್ಕಟ್ ದೇವದಾಸ್ ಕಾಪಿಕಾಡ್ ಅಭಿಯಾನ ಆರಂಭವಾಗಿದ್ದು ಅದರ ಬೆನ್ನಲ್ಲೇ ಈ ಸ್ಪಷ್ಟನೆ ಹೊರಬಂದಿದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago