Featured

ಮಂಗಳೂರು : ನಾನು ರೇಸ್‌ನಲ್ಲಿ ಓಡುವ ಕುದುರೆಯೂ ಅಲ್ಲ, ಕತ್ತೆನೂ ಅಲ್ಲ:  ಬಿ.ಕೆ ಹರಿಪ್ರಸಾದ್‌ – vishwanews24

ಮಂಗಳೂರು:ನಾನು ರೇಸ್‌ನಲ್ಲಿ ಓಡುವ ಕುದುರೆಯೂ ಅಲ್ಲ, ಕತ್ತೆನೂ ಅಲ್ಲ:  ಬಿ.ಕೆ ಹರಿಪ್ರಸಾದ್‌

ಮಂಗಳೂರು : ನಾನು ಯಾವ ರೇಸ್‌ನಲ್ಲೂ ಇಲ್ಲ. ನಾನು ರೇಸ್‌ನಲ್ಲಿ ಓಡುವ ಕುದುರೆಯೂ ಅಲ್ಲ, ಕತ್ತೆನೂ ಅಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಸುದ್ದಿಗಾರರ ಮಾತನಾಡಿದ ಅವರು, ಮುಖ್ಯಮಂ ತ್ರಿ ಹುದ್ದೆಯ ಆಕಾಂಕ್ಷಿಯೇ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಅವಕಾಶ ನೀಡಿದ ಕುರಿತು ಕಾನೂನು ಹೋರಾಟ ನಡೆಯುತ್ತಿದೆ.ಇದೇ 9ರಂದು ಇದಕ್ಕೆ ಸಂಬಂಧಿಸಿ ವಿಚಾರಣೆ ನಿಗದಿಯಾಗಿದೆ. ಬಳಿಕ ಈ ಬಗ್ಗೆ ಯೋಚನೆ ಮಾಡೋ ಣ. ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಯೂ ಆಗುತ್ತಿದೆ. ಆ ತೀರ್ಮಾನ ಬರುವವರಗೆ ಹೇಳಿಕೆ ನೀಡುವುದು ತಪ್ಪಾಗುತ್ತದೆ ಎಂದರು.

ಮುಖ್ಯಮಂ ತ್ರಿ ಹುದ್ದೆ ಕುರಿತು ಪಕ್ಷದ ನಾಯಕರು ಹೇಳಿಕೆ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಮಾಧ್ಯಮದವರು ಪ್ರಶ್ನೆ ಕೇಳಿದಾಗ ನಾಯಕರು ಉತ್ತರ ನೀಡುತ್ತಾರೆ. ಅದಕ್ಕೆ ಏನೂ ಮಾಡೋದಕ್ಕೆ ಸಾಧ್ಯವಿಲ್ಲ, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ತೀರ್ಮಾನ ಮಾಡುತ್ತದೆ ಎಂದರು.

ಕೋವಿಡ್ ಸಮಯದ ಹಗರಣದ ಕುರಿತ ತನಿಖಾ ವರದಿ ಸಲ್ಲಿಕೆ ಆಗಿರುವ ಕುರಿತು ಪ್ರತಿಕ್ರಿಯಸಿದ ಅವರು, ಕೋವಿಡ್ ಸಂದರ್ಭ ದಲ್ಲಿ ಡಾ. ಸುಧಾಕರ್ ಆರೋಗ್ಯ ಮಂತ್ರಿ ಆಗಿದ್ದರು. ಕೋವಿಡ್‌ನಿಂದ 4 ಲಕ್ಷ ಜನ ಪ್ರಾಣ ಕಳೆದುಕೊಂಡಿದ್ದಾರೆ ಕೋವಿಡ್ ಲಸಿಕೆ ನೀಡುವುದರಲ್ಲಿ ಏನೆಲ್ಲ ಅವ್ಯವಸ್ಥೆ ಆಗಿದೆ ಎಂಬುದನ್ನು ನೋಡಿದ್ದೇವೆ. ಈ ಕುರಿತ ತನಿಖಾ ವರದಿ ಹೊರಗಡೆ ಬರಲಿ. ತಪ್ಪು ಮಾಡಿದ್ದರೆ, ಅದಕ್ಕೆ ಶಿಕ್ಷೆ ಅನುಭವಿಸಲು ಅವರು ಸಿದ್ಧವಾಗಬೇಕು ಎಂದು ಹೇಳಿದರು.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago