Featured

ಮಂಗಳೂರು : ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ ; ಹಿಂದುತ್ವದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ : ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯೆ – Vishwanews24

ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ ..

ಇದಕ್ಕಾಗಿ ಜಿಹಾದಿ ಶಕ್ತಿಗಳು ನನ್ನ ಮೇಲೆ ಹಗೆ ಸಾಧಿಸುವ ಸಾಧ್ಯತೆ ..

ಹಿಂದುತ್ವದ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ ..

ತಲವಾರ್ ದಾಳಿ ಯತ್ನದ ಬಗ್ಗೆ ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯೆ

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರಿನ ಮೇಲೆ ಹಲ್ಲೆ ಪ್ರಕರಣ ಘಟನೆಯ ಬಗ್ಗೆ ಶಾಸಕ ಹರೀಶ್ ಪೂಂಜಾ ಮಾಹಿತಿ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಹರೀಶ್ ಪೂಂಜಾ ರಾತ್ರಿ ಬೆಂಗಳೂರಿನಿಂದ ಬಂದು ಬೆಳ್ತಂಗಡಿ ಹೋಗುತ್ತಿರುವಾಗ ಸುಮಾರು 11 ಗಂಟೆ ವೇಳೆ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ನಾನು ನನ್ನ ಸ್ನೇಹಿತನ ಕಾರಿನಲ್ಲಿದ್ದೆ, ದಾಳಿ ನಡೆಸಲು ಬಂದಿದ್ದ ಕಾರು ಚಾಲಕ ಮೊದಲು ನನ್ನ ಇನ್ನೋವಾ ಕಾರಿಗೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಆ ಕಾರಿನಲ್ಲಿ ನಾನು ಇಲ್ಲದ ಕಾರಣ ಮತ್ತೆ ನಾನಿದ್ದ ಹುಂಡೈ I 20 ಕಾರಿನ ಮೇಲೆ ಹಲ್ಲೆ ನಡೆಸಿದ್ದಾನೆ.

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಗಳಿಂದ ತಲವಾರು ದಾಳಿ ಯತ್ನ ; ದೂರು ದಾಖಲು – Vishwanews24

ಕಾರಿನ ಗಾಜಿನ ಮೇಲೆ ಹ್ಯಾಂಡಲ್ ಇರುವ ತಲುವಾರು ಮೂಲಕ ಹೊಡೆದಿದ್ದಾನೆ. ಈ ವಿಚಾರವನ್ನು ತಕ್ಷಣವೇ ಬಂಟ್ವಾಳ ಡಿವೈಎಸ್ಪಿ ಗಮನಕ್ಕೆ ತಂದಿದ್ದೇನೆ, ಗೃಹ ಸಚಿವರೂ ನನ್ನ ಬಳಿ ಈ ವಿಚಾರವಾಗಿ ಚರ್ಚಿಸಿದ್ದಾರೆ. ಭದ್ರತೆಗೆ ವ್ಯವಸ್ಥೆ ಮಾಡುವ ಭರವಸೆಯನ್ನೂ ನೀಡಿದ್ದಾರೆ. ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ ಇದಕ್ಕಾಗಿ ಜಿಹಾದಿ ಶಕ್ತಿಗಳು ನನ್ನ ಮೇಲೆ ಹಗೆ ಸಾಧಿಸುವ ಸಾಧ್ಯತೆಯಿದೆ, ಯಾವುದೇ ಕಾರಣಕ್ಕೂ ಹಿಂದುತ್ವದ ವಿಚಾರದಲ್ಲಿ ರಾಜಿಯಿಲ್ಲ ಎಂದಿದ್ದಾರೆ.

ಕೇರಳ ನೊಂದಣಿಯ ಕಾರು ಚಾಲಕ ಈ ಕೃತ್ಯ ವೆಸಗಿದ್ದು, ಈಗಾಗಲೇ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಕಾರಿನ ನಂಬರ್ ನೀಡಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.

ಹರೀಶ್ ಪೂಂಜಾರ ಮೇಲೆ ತಲವಾರ್ ದಾಳಿ ಯತ್ನ : ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮಕೈಗೊಳ್ಳುವಂತೆ ಹಿಂದು ಜಾಗರಣ ವೇದಿಕೆ ಆಗ್ರಹ – VIshwanews24

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

9 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

19 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

19 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

19 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago