Featured

ಮಂಗಳೂರು: ನಾವು ಮಾಡಿದ ಹೋರಾಟದ ಪ್ರತಿಫಲದಿಂದ ಸಮಾಜ ವಿಜ್ಞಾನ ದಲ್ಲಿ ಬ್ರಹ್ಮರ್ಷಿ ನಾರಾಯಣಗುರು ಪಾಠ ಸೇರಿದೆ : ಮಿಥುನ್‌ ರೈ – Vishwanews24

ಮಂಗಳೂರು: ನಾವು ಮಾಡಿದ ಹೋರಾಟದ ಪ್ರತಿಫಲದಿಂದ ಸಮಾಜ ವಿಜ್ಞಾನ ದಲ್ಲಿ ಬ್ರಹ್ಮರ್ಷಿ ನಾರಾಯಣಗುರು ಪಾಠ ಸೇರಿದೆ : ಮಿಥುನ್‌ ರೈ

ಮಂಗಳೂರು: ಪಠ್ಯಪುಸ್ತಕದ ಬಗ್ಗೆ ಸುಳ್ಳು ಹೇಳಿಕೆ ನೀಡಿದ ಬಿಜೆಪಿಯವರು ವಿಶೇಷವಾಗಿ ಸಚಿವ ಕೋಟಾ ಹಾಗೂ ಸುನೀಲ್‌ ಕುಮಾರ್‌ ದ.ಕ ಜಿಲ್ಲೆಯರ ಬಳಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್‌ ಯುವ ನಾಯಕ ಮಿಥುನ್‌ ರೈ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಠ್ಯಪುಸ್ತಕದಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಪಠ್ಯ ತೆಗೆದ ವಿಚಾರಕ್ಕೆ ಸಂಬಂಧಪಟ್ಟಂತೆ ವಿವಾದವೆದ್ದಾಗ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್‌ ಕುಮಾರ್ ಪಠ್ಯವನ್ನು ತೆಗೆದಿಲ್ಲ.

ಕಾಂಗ್ರೆಸ್‌ನವರು ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದರು. ಇದೀಗ ಶಿಕ್ಷಣ ಸಚಿವರು ಸಮಾಜ ವಿಜ್ಞಾನದ ನಾರಾಯಣ ಗುರು ಪಠ್ಯದಲ್ಲಿ ಸೇರಿಸುವಂತೆ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಸಚಿವ ಕೋಟಾ, ಸುನೀಲ್‌ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿ ಜನರ ಭಾವನೆ ಜೊತೆಗೆ ಚೆಲ್ಲಾಟವಾಡಿದ್ದಾರೆ.

ಆದ್ದರಿಂದ ಅವರು ಜಿಲ್ಲೆಯ ಜನತೆಯ ಕ್ಷಮೆ ಕೇಳಬೇಕು ಎಂದರು. ಅಂದು ನಾವು ಮಾಡಿದ ಹೋರಾಟದ ಪ್ರತಿಫಲದಿಂದ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಹ್ಮರ್ಷಿ ನಾರಾಯಣಗುರು ಪಾಠ ಸೇರಿದೆ.

ಇನ್ನೂ ಕೂಡ ಪಠ್ಯಪುಸ್ತಕದಲ್ಲಿ ಹಲವಾರು ತಪ್ಪುಗಳಿವೆ. ಆ ತಪ್ಪುಗಳನ್ನು ಸದ್ಯದಲ್ಲೇ ಬಯಲು ಮಾಡುತ್ತೇವೆ. ನಿನ್ನೆ ಮಳೆ ಹಾನಿ ಪರಿಶೀಲಿಸಲು ಜಿಲ್ಲೆಗೆ ಭೇಟಿ ನೀಡಿದ ಸಿಎಂ ಮೂಲ್ಕಿ-ಮೂಡಬಿದ್ರೆ ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಇದೇ ವೇಳೆ ಆರೋಪಿಸಿದರು.

Vishwa News 24

Recent Posts

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

24 minutes ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

2 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

2 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

4 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

4 hours ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

6 hours ago