Featured

ಮಂಗಳೂರು: ನಿಂಬೆ ಹಣ್ಣು ಸಾಗಾಟದ ವಾಹನದಲ್ಲಿ  ಗಾಂಜಾ ಸಾಗಾಟ : ಇಬ್ಬರ ಬಂಧನ  -Vishwanews24

ಮಂಗಳೂರು: ನಿಂಬೆ ಹಣ್ಣು ಮಾರಾಟದ ಮಧ್ಯೆ ಗಾಂಜಾ ಸಾಗಾಟ : ಇಬ್ಬರ ಬಂಧನ  -Vishwanews24

ಮಂಗಳೂರು : ನಿಂಬೆಹಣ್ಣು ತುಂಬಿದ ವಾಹನದಲ್ಲಿ ಗಾಂಜಾ ಮರೆಮಾಚಿ ಸಾಗಿಸುತ್ತಿದ್ದ ಇಬ್ಬರನ್ನು ಜೂ. 2 ರ ಶುಕ್ರವಾರ ರಾತ್ರಿ 8 ಗಂಟೆಗೆ ಬಂಧಿಸಲಾಗಿದ್ದು , ಇವರಿಂದ 20 ಪ್ಯಾಕೆಟ್‌ಗಳ 40 ಕೆ.ಜಿ ಗಾಂಜಾವನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಕಾಸರಗೋಡು ಕಂಬಲ್ಲೂರು ಚಿತ್ತಾರಿಕಲ್ ನ ವಳಪ್ಪಿಲ್ ಪುಮ್ಕೊಡೆ ಭೀಮನದಿಯ ಶಿಹಾಬುದ್ದೀನ್ (32) ಹಾಗೂ ಚಿತ್ತಾರಿಕಲ್ ತೆಕ್ಕೆಪೀಡಿಕಾಯಿಲ್, ಕಾಡುಮೆನಿ ಮಾನಕಟ್ಟೆಯ ಲತೀಫ್( 38) ಎಂದು ಗುರುತಿಸಲಾಗಿದೆ.

ಉರ್ವಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕೊಟ್ಟಾರ ಚೌಕಿ ಚೆಕ್ ಪೋಸ್ಟ್ ನಲ್ಲಿ ಉಡುಪಿ ಕಡೆಯಿಂದ ಮಹೀಂದ್ರಾ ಪಿಕ್ ಅಪ್ ವಾಹನವನ್ನು ತಪಾಸಣೆಗೊಳಪಡಿಸಿದಾಗ ಪ್ಲಾಸ್ಟಿಕ್ ಟ್ರೇಗಳಲ್ಲಿ ತುಂಬಿದ ಲಿಂಬೆ ಹಣ್ಣುಗಳ ಮಧ್ಯೆ ತಲಾ 2 ಕೆ.ಜಿ ತೂಕದ 20 ಗಾಂಜಾ ಪ್ಯಾಕೇಟ್ ಗಳ ಒಟ್ಟು 40 ಕೆಜಿ ಜೋಡಿಸಿ ಅಕ್ರಮವಾಗಿ ಸಾಗಾಟ ಮಾಡುವುದು ಪತ್ತೆಯಾಗಿದೆ.

ಆರೋಪಿಗಳು ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಗಾಂಜಾ ಸಾಗಾಟ ಮಾಡುತ್ತಿದ್ದು, ಕೃತಕ್ಕೆ ಬಳಸಿದ ವಾಹನ ಸಮೇತ 11,17000 rರೂ. ಮೌಲ್ಯದ ಸೋತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಕಾನೂನು ಸುವ್ಯವಸ್ಥೆ ಹರಿರಾಮ್ ಶಂಕರ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದು,ಈ ಸಂದರ್ಭ ಎಸಿಪಿ ಸೆಂಟ್ರಲ್ ಪಿಎ ಹೆಗ್ಡೆ ಉಪಸ್ಥಿತರಿದ್ದರು.

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

4 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

4 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

5 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

5 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

5 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

5 hours ago