ಮಂಗಳೂರು : ರಾಜ್ಯವಿಧಾನ ಸಭೆ ಮತದಾನ ಮುಗಿದಿದ್ದು ಇನ್ನೇನಿದ್ದರೂ ಫಲಿತಾಂಶದದ್ದೇ ಕುತೂಹಲ. ಈ ಸಂದರ್ಭಗಳಲ್ಲಿ ಜ್ಯೋತಿಷಿಗಳ ಭವಿಷ್ಯದ ನುಡಿ, ಲೆಕ್ಕಾಚಾರಗಳಿಗೆ ಡಿಮ್ಯಾಂಡ್ ಇದ್ದೇ ಇರುತ್ತದೆ. ಈ ನಡುವೆ ಖ್ಯಾತ ವಿಚಾರವಾದಿ ಪ್ರೊ.ನರೇಂದ್ರ ನಾಯಕ್ ಜ್ಯೋತಿಷಿಗಳಿಗೆ ನೇರ ಸವಾಲು ಹಾಕಿದ್ದಾರೆ.
ವಿಧಾನಸಭೆಯ ಚುನಾವಣೆಯ ಫಲಿತಾಂಶದ ನಿಖರವಾಗಿ ಭವಿಷ್ಯ ನುಡಿದು ಅವರ ಹೇಳಿಕೆ, ಲೆಕ್ಕಾಚಾರ ಸರಿಯಾದರೆ ಅಂತಹ ಜ್ಯೋತಿಷಿಗಳಿಗೆ 10 ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ನರೇಂದ್ರ ನಾಯಕ್ ಘೋಷಿಸಿದ್ದಾರೆ. ಈಗಾಗಲೇ 20ಕ್ಕೂ ಹೆಚ್ಚು ಜ್ಯೋತಿಷಿಗಳು ಅಂಚೆ ಮೂಲಕ ಫಲಿತಾಂಶದ ಉತ್ತರ ಬರೆದು ಕಳುಹಿಸಿದ್ದಾರೆ.
ಭಾರತೀಯ ವಿಚಾರವಾದಿ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವ ನರೇಂದ್ರ ನಾಯಕ್ ಕಳೆದ ಮೂವತ್ತು ವರ್ಷಗಳಿಂದ ಜ್ಯೋತಿಷಿಗಳಿಗೆ ಈ ಸವಾಲನ್ನು ಹಾಕುತ್ತಲೇ ಇದ್ದಾರೆ. ಆದರೆ ಯಾವೊಬ್ಬ ಜ್ಯೋತಿಷಿಯು ಈವರೆಗೆ ಸವಾಲನ್ನು ಯಶಸ್ವಿಯಾಗಿ ಪೂರೈಸಿಲ್ಲ. ನಾನು ಕೇಳಿರುವ 20 ಪ್ರಶ್ನೆಗಳಲ್ಲಿ 19 ಪ್ರಶ್ನೆಗಳಿಗೆ ನಿಖರ ಉತ್ತರ ನೀಡಿದರೂ 10 ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಹೇಳಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…