Featured

ಮಂಗಳೂರು : ನಿರಪರಾಧಿಗಳಿಗೆ ಮುಕ್ತಿ ನೀಡಿ, ನೈಜ ಅಪರಾಧಿಯನ್ನ ಶಿಕ್ಷಿಸಿ, ಸಮಾಜವನ್ನ ರಕ್ಷಿಸಿ : ಸರ್ಕಾರಕ್ಕೆ ಯು.ಟಿ ಖಾದರ್ -Vishwanews24

ಮಂಗಳೂರು,: “ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ನೈಜ ಆರೋಪಿಯ ಪತ್ತೆ ಹಚ್ಚುವ ಬದಲು ಸರ್ಕಾರ ಅಮಾಯಕರನ್ನ ಬಂಧಿಸುತ್ತಿದೆ. ಈ ಮೂಲಕ ನೈಜ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ” ಎಂದು ಶಾಸಕ ಯು.ಟಿ ಖಾದರ್ ಆರೋಪಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಸರ್ಕಾರದ ವಿರುದ್ದ ಕಿಡಿಕಾರಿರುವ ಶಾಸಕ ಖಾದರ್ ” ಸರ್ಕಾರದ ಭಯ ಇದ್ರೆ ಡಿ.ಜೆ ಹಳ್ಳಿ , ಕೆ.ಜಿ ಹಳ್ಳಿಯಲ್ಲಿ ಪುಂಡರು ಈ ರೀತಿ ವರ್ತಿಸುತ್ತಿರಲಿಲ್ಲ.ಇದು ಸರ್ಕಾರದ ವೈಫಲ್ಯವಲ್ಲದೆ ಮತ್ತೇನು?” ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಶಾಸಕ ತನ್ವೀರ್ ಸೇಠ್ ಮೇಲಿನ ಮಾರಣಾಂತಿಕ ಹಲ್ಲೆ ತಡೆಯಲಾಗಲಿಲ್ಲ. ಆರೋಪಗಳಿನ್ನೂ ಪತ್ತೆ ಹಚ್ಚಲಾಗಲಿಲ್ಲ. ಪ್ರವಾದಿಗೆ ನಿಂದಿಸಿದ ವ್ಯಕ್ತಿ ಪಕ್ಕದಲ್ಲೇ ಇದ್ದರು ಬಂದಿಸಲಿಲ್ಲ. ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಬೀಳೋ ತನಕ,ಪೋಲಿಸ್ ಠಾಣೆ ಸುಟ್ಟು ಬೂದಿಯಾಗೋ ತನಕ, ಪೋಲಿಸರು ಏನೂ ಮಾಡಿಲ್ಲ, ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆಯಾದ ಪ್ರಕರಣದ‌ ಕಥೆ ಏನಾಯ್ತು ಗೊತ್ತಿಲ್ಲ,ಮಂಗಳೂರು ಗಲಭೆಗೆ ಕೇರಳದಿಂದ ಬಂದವರು ಕಾರಣ ಎಂದಿದ್ದೀರಿ,ಹಾಗಿದ್ದರೆ ಒಬ್ಬ ಕೇರಳಿಗರನ್ನ ಏಕೆ ಬಂದಿಸಿಲ್ಲ” ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜಕೀಯದ ಕೆಸರೆರಚಾಟ ಮಾಡುವ ಬದಲು ಸಮಾಜಘಾತುಕ ಶಕ್ತಿ ಯಾರೇ ಇರಲಿ ಅವರನ್ನ ಮಟ್ಟ ಹಾಕಿ ನಿಮ್ಮ ಬದ್ದತೆಯನ್ನ ತೋರಿಸಿ.ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ಅಧಿಕಾರದಲ್ಲಿ ಕುಳಿತು ಇನ್ನೊಬ್ಬರ ಮೇಲೆ ಬೆರಳು ತೋರಿಸುವುದೇ ನಿಮ್ಮ ಸ್ವರ್ಣಯುಗವೇ? ಬಂಧಿಸಿದ ನಿರಪರಾಧಿಗಳಿಗೆ ಮುಕ್ತಿ ನೀಡಿ, ನೈಜ ಅಪರಾಧಿಯನ್ನ ಶಿಕ್ಷಿಸಿ,ಸಮಾಜವನ್ನ ರಕ್ಷಿಸಿ ಎಂದು ಮತ್ತೊಂದು ಟ್ವೀಟ್’ ನಲ್ಲಿ ಹೇಳಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

7 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

7 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

7 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

22 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

22 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

22 hours ago