Featured

ಮಂಗಳೂರು:  ನೀರು ಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: 10 ಕಿ.ಮೀ ವ್ಯಾಪ್ತಿಯನ್ನ ಜಾಗೃತ ವಲಯ ಘೋಷಿಸಿದ ಜಿಲ್ಲಾಡಳಿತ..Vishwanews24

ಮಂಗಳೂರು:  ನೀರು ಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: 10 ಕಿ.ಮೀ ವ್ಯಾಪ್ತಿಯನ್ನ ಜಾಗೃತ ವಲಯ ಘೋಷಿಸಿದ ಜಿಲ್ಲಾಡಳಿತ..

ಮಂಗಳೂರು : ಮಂಗಳೂರು ನಗರದ ನೀರುಮಾರ್ಗದಲ್ಲಿ ಆಫ್ರಿಕನ್​ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಜಿಲ್ಲಾಡಳಿತ ಘೋಷಿಸಿದೆ.

ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ.

ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದು ಜನ ಭಯಭೀತರಾಗುವುದು ಬೇಡಾ ಎಂದು ತಿಳಿಸಿದ್ದಾರೆ.

ಈ ಹಂದಿ ಸಾಕಣೆ ಕೇಂದ್ರದಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ.

ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

India Post Office Recruitment..🌐 ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿ 2022..

ಪ್ರಸ್ತುತ ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ.

ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು.

ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು.

ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು.

ಉಡುಪಿ: ಹಾವಿನ ವಿಷ ಚುಚ್ಚಿ ಪತ್ನಿಯ ಹತ್ಯೆ ಪ್ರಕರಣ..ಆರೋಪ ಸಾಬೀತುಪಡಿಸಲು ವಿಫಲ. ಪತಿ ಸಹಿತ ಆರೋಪಿಗಳ ಖುಲಾಸೆ – Vishwanews24

ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago