Featured

ಮಂಗಳೂರು : ನೂತನ ಕಟ್ಟಡದಲ್ಲಿ ಬೀಫ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡುವುದಿಲ್ಲ  : ವೇದವ್ಯಾಸ್ ಕಾಮತ್ – Vishwanews24

ಮಂಗಳೂರು : ನೂತನ ಕಟ್ಟಡದಲ್ಲಿ ಬೀಫ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡುವುದಿಲ್ಲ  : ವೇದವ್ಯಾಸ್ ಕಾಮತ್

ಮಂಗಳೂರು:ಸೆಂಟ್ರಲ್ ಮಾರ್ಕೆಟ್ ನಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡದಲ್ಲಿ ಭೀಪ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡುವುದಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಬೀಫ್ ಸ್ಟಾಲ್ ಕುರಿತು ಇಂದು ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ ಶಾಸಕ ಕಾಮತ್, ಈ ಹಿಂದಿನ ಮಾರುಕಟ್ಟೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ 114 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ನೂತನವಾಗಿ ನಿರ್ಮಿಸುವ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ನೀಡುವುದಿಲ್ಲ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನ ಜಾರಿಗೊಳಿಸಿದ ಬಳಿಕ ಗೋಹಂತಕರ ಆಸ್ತಿ ಜಪ್ತಿ, ಕಠಿಣ ಕಾನೂನು ಕ್ರಮಗಳ ಮೂಲಕ ಗೋಹಂತಕರಿಗೆ ಸ್ಪಷ್ಟ ಸಂದೇಶ ನೀಡಲಾಗಿದೆ ಎಂದು ಹೇಳಿದರು.

ಉಡುಪಿ: 3 ಜಿಲ್ಲೆಯಲ್ಲಿ ಕುಚ್ಚಲಕ್ಕಿ ವಿತರಣೆ ಆರಂಭ..ಜನ ಸಂಕಲ್ಪ ಸಭೆಯಲ್ಲಿ ಸಿಎಂ ಬೊಮ್ಮಾಯಿ ಘೋಷಣೆ..

ನೂತನ ಮಾರುಕಟ್ಟೆ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಿದ್ದ‌ ಸಂದರ್ಭದಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗಿರಲಿಲ್ಲ. ಸದ್ಯ ಗೋಹತ್ಯೆ ನಿಷೇಧ ಕಾನೂನು ಜಾರಿಗೊಂಡಿದ್ದು ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅನುಮತಿ ನೀಡಲಾಗುವುದಿಲ್ಲ. ಹಿಂದೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಬದಲಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಬೀಫ್ ಸ್ಟಾಲ್ ಕಾರ್ಯಾಚರಿಸಲು ಅನುಮತಿ ನೀಡುವುದಿಲ್ಲ ಎಂದು ಹೇಳಿದರು.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

23 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

23 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

23 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

23 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

1 day ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

3 days ago