ಮಂಗಳೂರು: ನೆಹರು ಆಧುನಿಕ ಭಾರತದ ಶಿಲ್ಪಿ ಎಂದು ಬಿ ರಮಾನಾಥ್ ರೈ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಂಡಿತ್ ಜವಹರಲಾಲ್ ನೆಹರು ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮತನಾಡಿದರು
ಪಂಡಿತ್ ಜವಹರಲಾಲ್ ನೆಹರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದ್ದರು. ಅವರ ಸೇವೆ, ತ್ಯಾಗ ಮತ್ತು ಭಾರತಕ್ಕಾಗಿ ನೀಡಿದ ಮಹತ್ವಪೂರ್ಣ ಕೊಡುಗೆ ಪಾತ್ರ ಸ್ಮರಣೀಯವಾದದ್ದು ವೈಜ್ಞಾನಿಕ ಮನೋಭಾವದ ನೆಹರುರವರು ಪ್ರಜಾಪ್ರಭುತ್ವ, ಜಾತ್ಯತೀತ ಮೌಲ್ಯಗಳನ್ನು ಸಂವಿದಾನದಲ್ಲಿ ಸೇರಿಸಲು ಶ್ರಮಪಟ್ಟಿದ್ದರು. ಅಲ್ಪಸಂಖ್ಯಾತ ಕೋಮುವಾದ ಆ ಸಮುದಾಯಕ್ಕೆ ಅಪಾಯವಾದರೆ ಬಹುಸಂಖ್ಯಾತ ಕೋಮುವಾದವು ಈ ದೇಶಕ್ಕೆ ಅಪಾಯ ಎಂಬ ನೆಹರುರವರ ಮಾತುಗಳು ದೇಶದ ಇಂದಿನ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂಬುದು ಬಿ ರಮಾನಾಥ್ ರೈ ಅಭಿಪ್ರಾಯಪಟ್ಟರು.
ದ. ಕ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಂಡಿತ್ ಜವಾರಲಾಲ್ ನೆಹರು ರವರ ಪುಣ್ಯತಿಥಿ ಕಾರ್ಯಕ್ರಮ ಆಚರಿಸಲಾಯಿತು. ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ರವರು ಪ್ರಾಸ್ತವಿಕ ಮಾತುಗಳೊಂದಿಗೆ ನೆಹರುರವರಿಗೆ ನುಡಿನಮನ ಸಲ್ಲಿಸಿದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ಕ್ರತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಪದ್ಮರಾಜ್ ಆರ್ ಪೂಜಾರಿ, ಮಲರ್ ಮೊಹಮ್ಮದ್ ಮೋನು, ಪ್ರಕಾಶ್ ಸಾಲಿಯಾನ್, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಮಂಜುಳಾ ನಾಯಕ್, ಸದಾಶಿವ ಶೆಟ್ಟಿ, ಪದ್ಮನಾಭ ರೈ ಕಲ್ಲಡ್ಕ, ಟಿ ಹೊನ್ನಯ್ಯ, ವಿಕಾಸ್ ಶೆಟ್ಟಿ, ಶುಭೋದಯ ಆಳ್ವಾ, ಸಬೀರ್ ಎಸ್, ಸತೀಶ್ ಪೆಂಗಲ್, ಝಕೀರ್ಯ ಮಲರ್, ಆಳ್ವಿನ್ ಪ್ರಕಾಶ್, ಪ್ರವೀಣ್ ಆಳ್ವಾ, ಕವಿತಾ ವಾಸು, ಜಿತೇಂದ್ರ ಸುವರ್ಣ, ಯೋಗೀಶ್ ಕುಮಾರ್, ಸಮರ್ಥ್ ಭಟ್, ಕೆ ಜೋರ್ಜ್, ಹೇಶವಂತ್ ಪ್ರಭು, ಡೆಂಝಿಲ್, ಅರ್ಚನಾ ಆಚಾರಿಯಾ, ಜಾನ್ ಮೊಂತೇರೋ, ನಝೀರ್ ಬಜಾಲ್ ಮೊದಲದವರು ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…