ಮಂಗಳೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ.

ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳದ ’ಅಯ್ಯೋ ಶ್ರದ್ಧಾ ’ ಅವರಿಗೆ ಅತ್ಯಂತ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ – Vishwanews24

Leave a Reply