ಮಂಗಳೂರು: ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಗಾಯಗೊಂಡ ಸವಾರ ಸಾವು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಗಾಯಗೊಂಡ ಸವಾರ ಸಾವು – Vishwanews24

ಮಂಗಳೂರು : ನೇತ್ರಾವತಿ ಸೇತುವೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.

ಮೃತನನ್ನು ಸಚಿನ್ ಕೆ ಎಂ (32) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಲೆಟ್ಸ್ ಪಾರ್ಟಿ ಎಂಬ ಹೆಸರಿನಲ್ಲಿ ಅಂಗಡಿಯೊಂದನ್ನು ಹೊಂದಿದ್ದ ಇವರು ಚಿಲಿಂಬಿ ನಿವಾಸಿಯಾಗಿದ್ದಾರೆ.

ಅಪಘಾತದ ಸ್ಥಳದಲ್ಲಿ ದೊರೆತ ಪಾನ್ ಕಾರ್ಡ್‌ ಆಧಾರದ ಮೇಲೆ ಪೊಲೀಸರು ಮೃತರನ್ನು ಸಚಿನ್ ಕೆ ಎಂ (32) ಎಂದು ಗುರುತಿಸಲಾಗಿದೆ.

ಉರ್ವದಲ್ಲಿ ಎಲೆಕ್ಟ್ರಿಕಲ್ ಡೆಕೋರೇಟರಾಗಿ ಕೆಲಸ ಮಾಡುತ್ತಿದ್ದ ಅವರ ಬೈಕ್ ರಾತ್ರಿ 11.45ರ ಸುಮಾರಿಗೆ ನೇತ್ರಾವತಿ ಸೇತುವೆ ಬಳಿ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅದರೆ ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೂಲ್ಕಿ : ಕೋವಿಡ್ -19 : ಐಕಳಬಾವ ಕಾಂತಾಬಾರೆ -ಬೂದಾಬಾರೆ ಜೋಡು ಕರೆ ಕಂಬಳ ದಿನಾಂಕ ಮುಂದೂಡಿಕೆ – Vishwanews24

Leave a Reply