ಮಂಗಳೂರು: ನೇತ್ರಾವತಿ ನದಿ ಸೇತುವೆಯಿಂದ ಜಿಗಿದು ಆತ್ಮಹತ್ಯೆ ನಡೆಸುವವರ ಶೋಧ ಕಾರ್ಯಗಳಿಗೆ ಜಿಲ್ಲಾಡಳಿತದಿಂದ ಲಕ್ಷಾಂತರ ರೂ ಖರ್ಚಿನ ಹೊರೆಯಾಗುತ್ತಿದ್ದು ಇಂತಹ ಅನಗತ್ಯ ಖರ್ಚು ಉಳಿಸುವ, ಆತ್ಮಹತ್ಯೆ ನಡೆಸದಂತೆ ಮನಪರಿವರ್ತಿಸುವ ಸಲುವಾಗಿ ನೇತ್ರಾವತಿ ಸೇತುವೆಯುದ್ದಕ್ಕೂ ಫೆನ್ಸಿಂಗ್ ಮತ್ತು ಸಿಸಿಟಿವಿಯನ್ನು ಅಳವಡಿಸಲಾಗಿದೆ ಎಂದು ಮಂಗಳೂರು ಉತ್ತರ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಕುಂದಾಪುರ : ಬ್ಯಾಂಕುಗಳ ವಿಲೀನ ಮಾಡಿರುವುದು ದೇಶದ ಒಳಿತಿಗಾಗಿ : ಸಂಸದ ಬಿ ವೈ ರಾಘವೇಂದ್ರ -Vishwanews24
ಅವರು ಮುಡಾ ಅಭಿವೃದ್ಧಿ ಪ್ರಾಧಿಕಾರ 63 ಲಕ್ಷ ರೂ. ವೆಚ್ಚದಲ್ಲಿ ನೇತ್ರಾವತಿ ಸೇತುವೆಗೆ ನಿರ್ಮಿಸಿದ ಫೆನ್ಸಿಂಗ್ ಮತ್ತು ಸಿಸಿಟಿವಿಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಕಾಮತ್ ಅವರು “ಜನ ಕೆಟ್ಟ ಸಂದರ್ಭದಲ್ಲಿ ನೇತ್ರಾವತಿ ಸೇತುವೆಯನ್ನೇ ಅವಲಂಬಿಸಿ ಆತ್ಮಹತ್ಯೆ ನಡೆಸುತ್ತಿದ್ದರು. ಒಂದು ವರ್ಷದಲ್ಲಿ ಅಂದಾಜು 10-15 ರಷ್ಟು ಮಂದಿ ಆತ್ಮಹತ್ಯೆಗೈದಿರುವ ಪ್ರಕರಣಗಳು ನಡೆದಿವೆ. ಅಲ್ಲದೆ ಅಂತರಾಷ್ಟ್ರೀಯ ಮಟ್ಟದ ಉದ್ಯಮಿ ಸಿದ್ದಾರ್ಥ್ ಕೂಡಾ ಆತ್ಮಹತ್ಯೆ ನಡೆಸಿರುವುದು , ಮಂಗಳೂರಿನ ಪಾಲಿಗೆ ನೇತ್ರಾವತಿ ಸೇತುವೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು. ಆತ್ಮಹತ್ಯೆ ಸಂದರ್ಭ ಜಿಲ್ಲಾಡಳಿತ ನೇತೃತ್ವದಲ್ಲಿ ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ, ಕರಾವಳಿ ಕಾವಲು ಪಡೆ , ಮೀನುಗಾರರು ಎಲ್ಲರೂ ಸೇರಿಕೊಂಡು ಶೋಧ ಕಾರ್ಯಕರ್ತರಿಗೆ ಲಕ್ಷಾಂತರ ವೆಚ್ಚ ಮಾಡಲಾಗುತ್ತಿದೆ.
ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ -Vishwanews24
ಇದು ಜಿಲ್ಲಾಡಳಿತಕ್ಕೆ ಹೊರೆಯಾಗಿ ಪರಿಣಮಿಸಿತ್ತು. ಇವೆಲ್ಲದನ್ನು ಗಮನದಲ್ಲಿಟ್ಟುಕೊಂಡು ಮುಂದೆ ಯಾರು ಆತ್ಮಹತ್ಯೆ ನಡೆಸದಂತೆ ಶಾಶ್ವತ ಪರಿಹಾರವಾಗಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾರ್ಪೊರೇಟರ್ ವೀಣಾ ಮಂಗಳ, ಮುಡಾ ಕಮೀಷನರ್ ದಿನೇಶ್ ಕುಮಾರ್, ಕಂಕನಾಡಿ ಠಾಣಾಧಿಕಾರಿ ಅಶೋಕ್ ಕುಮಾರ್, ಮನಪಾ ನಾಮನಿರ್ದೇಶಿತ ಸದಸ್ಯ ಭಾಸ್ಕರ ಚಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಉಜಿರೆ: ಕಳೆದ ಒಂಬತ್ತು ದಿನದ ಹಿಂದೆ ನಾಪತ್ತೆಯಾದ ಯುವತಿಯ ಮೃತದೇಹ ಕಾಡಿನಲ್ಲಿ ಪತ್ತೆ -Vishwanews24
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…