ಮಂಗಳೂರು, (Vishwanews24) : ಸರ್ಕಾರ ಸೂಚನೆಯಂತೆ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು ಶನಿವಾರ ರಾತ್ರಿ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 64 ದ್ವಿಚಕ್ರ ಮತ್ತು 4 ಚತುಷ್ಚಕ್ರ ವಾಹನಗಳ ಮೇಲೆ ಪ್ರಕರಣಗಳು ದಾಖಲಾಗಿವೆ.
ಹಲವು ರಸ್ತೆಗಳಲ್ಲಿ ಚೆಕ್ಪೋಸ್ಟ್ಗಳನ್ನು ರಚಿಸಿರುವ ಪೊಲೀಸರು ಆ ರಸ್ತೆಯಲ್ಲಿ ಯಾವುದೇ ಬಲವಾದ ಕಾರಣವಿಲ್ಲದೆ ವಾಹನದಲ್ಲಿ ಸಂಚರಿಸುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿದರು. ರಾತ್ರಿ 10 ಗಂಟೆಗೆ ನಗರ ಪೊಲೀಸ್ ಆಯುಕ್ತ ಎಸ್.ಶಶಿ ಕುಮಾರ್, ಡಿಸಿಪಿಗಳಾದ ವಿನಯ್ ಎ ಗೌಂಕರ್ ಹಾಗೂ ಹರಿರಾಮ್ ಶಂಕರ್ ಅವರು ನಗರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಇನ್ನು ಈ ನೈಟ್ ಕರ್ಫ್ಯೂ ವೇಳೆ ಮಾಜಿ ಸಚಿವ ಬಿ.ರಮನಾಥ್ ರೈ ಅವರು ಕಾರಿನಿಂದ ಇಳಿದು ಪೊಲೀಸರೊಂದಿಗೆ ಮಾತನಾಡಿ, ಪಡೀಲ್ ಜಂಕ್ಷನ್ನಲ್ಲಿ ಬ್ಯಾರಿಕೇಡ್ಗಳು ಸಂಚಾರಕ್ಕೆ ಅಡ್ಡಿಯಾಗುತ್ತಿದೆ ಎಂದು ತಿಳಿದುಬಂದ ನಂತರ ಬ್ಯಾರಿಕೇಡ್ಗಳನ್ನು ಕೊಂಚ ಸರಿಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಪೊಲೀಸರು ಪಬ್ಗಳು, ಬಾರ್ಗಳು ಮತ್ತು ರೆಸ್ಟೋರೆಂಟ್ಗಳ ಬಗ್ಗೆ ನಿಗಾ ಇಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ, ಕರ್ಫ್ಯೂ ಉಲ್ಲಂಘನೆಯ ಯಾವುದೇ ಪ್ರಕರಣಗಳು ದಾಖಲಾಗಿಲ್ಲ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಚಂದ್ರ ತಿಳಿಸಿದ್ದಾರೆ. ಕರ್ಫ್ಯೂ ಬಗ್ಗೆ ತಿಳಿಯದೆ ರಾತ್ರಿ 10 ಗಂಟೆಯ ನಂತರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕೆಲವು ವಾಹನಗಳಿಗೆ ಕೊರೊನಾ ನೈಟ್ ಕರ್ಫ್ಯೂ ಬಗ್ಗೆ ತಿಳಿಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಶನಿವಾರ ರಾತ್ರಿ ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿರುವ ಪೊಲೀಸ್ ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಿದರು. ಅವರು ರಾತ್ರಿ 10 ಗಂಟೆಯ ನಂತರ ಚಲಿಸುತ್ತಿದ್ದ ವಾಹನಗಳನ್ನು ನಿಲ್ಲಿಸಿ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ನೀಡಿರುವ ಸೂಚನೆಗಳನ್ನು ಅನುಸರಿಸಲು ತಿಳಿಸಿದರು.
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…