ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ, ಮಂಗಳೂರು ಮೂಲದ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ಕೊನೆಯುಸಿರೆಳೆದಿದ್ದಾರೆ.
ರಘುನಂದನ್ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ತಂದೆಯೊಂದಿಗೆ ವ್ಯಾಪಾರದಲ್ಲಿ ಕೈ ಜೋಡಿಸಿದ ಅವರು ಬಳಿಕ ಮಂಗಳೂರಿನಿಂದ ತನ್ನ 14ನೇ ವಯಸ್ಸಿನಲ್ಲೇ ಬಾಂಬೆಗೆ ತೆರಳಿದರು. ಅಣ್ಣನ ಹೋಟೆಲ್ನಲ್ಲಿ ಕೆಲ ಕಾಲ ಕೆಲಸ ಮಾಡಿ ಬಳಿಕ 1984 ರಲ್ಲಿ ಕಾಮತ್ ಅವರು ತಮ್ಮ ಮೊದಲ ನ್ಯಾಚುರಲ್ಸ್ ಐಸ್ ಕ್ರೀಮ್ ಮುಂಬೈನ ಜುಹುದಲ್ಲಿ ಸ್ಥಾಪಿಸಿದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ.
1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಆರಂಭಿಸಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ ದೇಶದಲ್ಲೇ ಪ್ರತಿಷ್ಠಿತ ಐಸ್ ಕ್ರೀಂ ಉದ್ಯಮವಾಗಿ ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿದೆ. ದೇಶಾದ್ಯಂತ 156 ಔಟ್ ಲೆಟ್ ಹೊಂದಿದ್ದು, ವರ್ಷಕ್ಕೆ 400 ಕೋಟಿ ರೂ.ಗೂ ಅಧಿಕ ವ್ಯವಹಾರ ಮಾಡುತ್ತಿದೆ.
ಅಲ್ಪಕಾಲದ ಅಸೌಖ್ಯದಿಂದ ಮೃತರಾದ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…