ಮಂಗಳೂರು: ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ, ಮಂಗಳೂರು ಮೂಲದ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬಯಿಯಲ್ಲಿ ಕೊನೆಯುಸಿರೆಳೆದಿದ್ದಾರೆ.
ರಘುನಂದನ್ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ತಂದೆಯೊಂದಿಗೆ ವ್ಯಾಪಾರದಲ್ಲಿ ಕೈ ಜೋಡಿಸಿದ ಅವರು ಬಳಿಕ ಮಂಗಳೂರಿನಿಂದ ತನ್ನ 14ನೇ ವಯಸ್ಸಿನಲ್ಲೇ ಬಾಂಬೆಗೆ ತೆರಳಿದರು. ಅಣ್ಣನ ಹೋಟೆಲ್ನಲ್ಲಿ ಕೆಲ ಕಾಲ ಕೆಲಸ ಮಾಡಿ ಬಳಿಕ 1984 ರಲ್ಲಿ ಕಾಮತ್ ಅವರು ತಮ್ಮ ಮೊದಲ ನ್ಯಾಚುರಲ್ಸ್ ಐಸ್ ಕ್ರೀಮ್ ಮುಂಬೈನ ಜುಹುದಲ್ಲಿ ಸ್ಥಾಪಿಸಿದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ.
1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಆರಂಭಿಸಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ ದೇಶದಲ್ಲೇ ಪ್ರತಿಷ್ಠಿತ ಐಸ್ ಕ್ರೀಂ ಉದ್ಯಮವಾಗಿ ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿದೆ. ದೇಶಾದ್ಯಂತ 156 ಔಟ್ ಲೆಟ್ ಹೊಂದಿದ್ದು, ವರ್ಷಕ್ಕೆ 400 ಕೋಟಿ ರೂ.ಗೂ ಅಧಿಕ ವ್ಯವಹಾರ ಮಾಡುತ್ತಿದೆ.
ಅಲ್ಪಕಾಲದ ಅಸೌಖ್ಯದಿಂದ ಮೃತರಾದ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…