ಮಂಗಳೂರು: ನಗರದ ಕೋಡಿಯಾಲ್ಬೈಲ್ನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಆರ್ಡಿಎಕ್ಸ್ ಐಇಡಿ ಬಾಂಬ್ ಇಡಲಾಗಿದೆ ಎಂಬ ಹುಸಿ ಬೆದರಿಕೆಯನ್ನು ಶುಕ್ರವಾರ ಹಾಕಲಾಗಿದೆ.
ಶುಕ್ರವಾರ ಮುಂಜಾವ ಸುಮಾರು 2:30ರ ವೇಳೆಗೆ ನ್ಯಾಯಾಲಯದ ಇಮೇಲ್ ಐಡಿಗೆ ಬೆದರಿಕೆ ಬಂದಿದೆ. ಈ ಮಾಹಿತಿಯು ಸಂಜೆಯ ವೇಳೆಗೆ ಕೋರ್ಟ್ ಸಿಬ್ಬಂದಿ ಗಮನಕ್ಕೆ ಬಂತು ಎನ್ನಲಾಗಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಅದರಂತೆ ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದರು. ಆದರೆ ಯಾವುದೇ ಕರುಹು ಕಾಣಲಿಲ್ಲ. ಬಳಿಕ ಇದೊಂದು ಹುಸಿ ಇಮೇಲ್ ಬೆದರಿಕೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ.
rajagiri_marudhayan@outlook.com| ಎನ್ನುವ ಇಮೇಲ್ ಐಡಿಯಿಂದ ಅಪರಿಚಿತ ವ್ಯಕ್ತಿಯೊಬ್ಬ ಇಮೇಲ್ ಕಳುಹಿಸಿದ್ದಾನೆ ಎಂದು ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ತಿಳಿಸಿದ್ದಾರೆ.
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…