Featured

ಮಂಗಳೂರು : ನ.18ರಂದು ಅಖಿಲ ಭಾರತ ಸಹಕಾರ ಸಪ್ತಾಹ – vishwanews24

ಮಂಗಳೂರು : ನ.18ರಂದು ಅಖಿಲ ಭಾರತ ಸಹಕಾರ ಸಪ್ತಾಹ

ಮಂಗಳೂರು: ಭವಿಷ್ಯದ ಸಹಕಾರಿ ಚಳುವಳಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಸಂಕಲ್ಪದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನೇತೃತ್ವದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ನ.18ರಂದು ಬೆಳಗ್ಗೆ 10ಕ್ಕೆ ನಗರದ ಉರ್ವ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ತಿಳಿಸಿದರು.

ಬ್ಯಾಂಕಿನ ಸಭಾಂಗಣದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನ.14ರಿಂದ 20ರ ವರೆಗೆ ರಾಷ್ಟ್ರಾದ್ಯಂತ ಸಹಕಾರ ಸಪ್ತಾಹ ನಡೆಯಲಿದೆ. ನ.14ರಂದು ಸಪ್ತಾಹದ ಉದ್ಘಾಟನೆ ನಡೆಯಲಿದೆ. ಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತದೆ. ಅದರಂತೆ, ದ.ಕ. ಜಿಲ್ಲೆಯಲ್ಲಿಯೂ ವಿವಿಧ ಕಡೆಗಳಲ್ಲಿ ಸಾಕಾರಗೊಳ್ಳಲಿದೆ. ಈ ಸಂಬಂಧ ವಿವಿಧ ಕಡೆಗಳಲ್ಲಿ ಸಹಕಾರ ರಥ ಸಂಚರಿಸಲಿದೆ ಎಂದರು.

ಮಂಗಳೂರಿನ ಉರ್ವ ಮೈದಾನದಲ್ಲಿ ನ.18ರಂದು ನಡೆಯುವ ಸಹಕಾರ ಸಪ್ತಾಹದಲ್ಲಿ ವಿಶೇಷವಾದ ವಸ್ತು ಪ್ರದರ್ಶನ ಮಳಿಗೆಗಳನ್ನು ಆಯೋಜಿಸಲಾಗಿದ್ದು ವಿಧಾನಸಭೆಯ ಸ್ಪೀಕರ್‌ ಯು.ಟಿ. ಖಾದರ್‌ ಉದ್ಘಾಟಿಸಲಿದ್ದಾರೆ. ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯುವ ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ನೆರವೇರಿಸಲಿದ್ದಾರೆ. ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ನೆರವೇರಿಸಲಿದ್ದಾರೆ. ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರವನ್ನು ಸಂಸದ ನಳಿನ್‌ ಕುಮಾರ್‌ ಕಟೀಲ್‌ ನೆರವೇರಿಸಲಿದ್ದಾರೆ. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ ನೆರವೇರಿಸಲಿದ್ದಾರೆ ಎಂದರು.

ಶಾಸಕರಾದ ಡಾ| ವೈ. ಭರತ್‌ ಶೆಟ್ಟಿ, ಯಶ್‌ಪಾಲ್‌ ಸುವರ್ಣ, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಸಹಕಾರ ಇಲಾಖೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌, ಸಹಕಾರ ಸಂಘಗಳ ನಿಬಂಧಕ ಕ್ಯಾ| ಡಾ| ಕೆ. ರಾಜೇಂದ್ರ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ನಗರ ಪೊಲೀಸ್‌ ಅಧಿಕಾರಿ ಅನುಪಮ್‌ ಅಗರ್ವಾಲ್‌ ಭಾಗವಹಿಸಲಿರುವರು ಎಂದರು.

ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ| ಉಮೇಶ್‌, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಪ್ರಸಾದ್‌ ಕೌಶಲ್ ಶೆಟ್ಟಿ, ಬ್ಯಾಂಕಿನ ನಿರ್ದೇಶಕರುಗಳಾದ ದೇವಿಪ್ರಸಾದ್‌ ಶೆಟ್ಟಿ ಬೆಳಪು, ಶಶಿಕುಮಾರ್‌ ರೈ ಬಾಲೊÂàಟ್ಟು, ಎಂ.ವಾದಿರಾಜ ಶೆಟ್ಟಿ, ಜೈರಾಜ್‌ ಬಿ. ರೈ, ರಾಜು ಪೂಜಾರಿ, ಸದಾಶಿವ ಉಳ್ಳಾಲ್ , ಸ್ಕ್ಯಾಡ್ಸ್‌ ಅಧ್ಯಕ್ಷ ರವೀಂದ್ರ ಕಂಬಳಿ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಲಾ ಪ್ರಕಾರದ “ಸಹಕಾರ ಜಾಥಾ’

ಡಾ|ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಮಾತನಾಡಿ, ನ.18ರಂದು ಬೆಳಗ್ಗೆ 9ಕ್ಕೆ ಬ್ಯಾಂಕ್‌ ಆವರಣದಿಂದ ಉರ್ವ ಕ್ರಿಕೆಟ್‌ ಮೈದಾನದವರೆಗೆ ಭವ್ಯ ಸಹಕಾರ ಜಾಥಾ ಸಾಗಿ ಬರಲಿದೆ. 15ಕ್ಕೂ ಅಧಿಕ ವಿವಿಧ ಸಾಂಸ್ಕೃತಿಕ ಕಲಾ ಪ್ರಕಾರದ ಸಹಕಾರಿ ಟ್ಯಾಬ್ಲೋಗಳು ಜಾಥಾದಲ್ಲಿ ಪಾಲ್ಗೊಳ್ಳಲಿವೆ. ಶಾಸಕ ವೇದವ್ಯಾಸ ಕಾಮತ್‌ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago