ಮಂಗಳೂರು: ಪಂಪ್ವೆಲ್ನಲ್ಲಿ ಪತ್ತೆಯಾಗಿದ್ದ ನೋಟಿನ ಬಂಡಲ್ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದ್ದು, ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಪಂಪ್ವೆಲ್ ಬಸ್ ನಿಲ್ದಾಣದ ಬಳಿ ನೋಟಿನ ಬಂಡಲ್ಗಳು ನವಂಬರ್ 26ರಂದು ಶಿವರಾಜ್ ಮತ್ತು ತುಕಾರಾಮ್ ಎಂಬವರಿಗೆ ಸಿಕ್ಕಿದ್ದು, ಶಿವರಾಜ್ ಬಳಿ ಇದ್ದ 49,000 ರೂ.ಗಳನ್ನು ಪೊಲಿಸರು ವಶಪಡಿಸಿಕೊಂಡಿದ್ದರು. ಆದರೆ ಇದೀಗ ವ್ಯಕ್ತಿಯೊಬ್ಬರು ಠಾಣೆಗೆ ತೆರಳಿ ತಾನೇ ಆ ಹಣದ ವಾರಸುದಾರ ಎಂದು ಹೇಳಿಕೊಂಡಿದ್ದು ತನಿಖೆ ನಡೆಯುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…