ಮಂಗಳೂರು : ನಗರದ ಪಂಪ್ವೆಲ್ ಸರ್ಕಲ್ನಿಂದ ಕಂಕನಾಡಿ ಬೈಪಾಸ್ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ 2026ರ ಏಪ್ರಿಲ್ 15 ರವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಪಂಪ್ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿ-ಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್ನಿಂದ ಪಂಪ್ವೆಲ್ ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ.
ಅದೇ ರೀತಿ ಪಂಪ್ವೆಲ್ನಿಂದ ಕಂಕನಾಡಿ ಓಲ್ಡ್ ರಸ್ತೆ – ಕಂಕನಾಡಿ ಜಂಕ್ಷನ್ ರಸ್ತೆಯನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಯನ್ನಾಗಿ ಘೋಷಿಸಿದೆ. ಏಕಮುಖ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.
ಪಡೀಲ್ ಹಾಗೂ ತೊಕ್ಕೊಟ್ಟು ಕಡೆಯಿಂದ ಪಂಪ್ವೆಲ್ ವೃತ್ತಕ್ಕೆ ಬಂದು ಕರಾವಳಿ ವೃತ್ತಕ್ಕೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಓಲ್ಡ್ ರಸ್ತೆಯ ಮೂಲಕ ಕಂಕನಾಡಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಕರಾವಳಿ ವೃತ್ತದ ಕಡೆಗೆ ಸಂಚರಿಸಬೇಕು.
ಫನ್ನೀರ್ ರಸ್ತೆಯಿಂದ ಹಾಗೂ ವೆಲೆನ್ಸಿಯಾ ರಸ್ತೆಯಿಂದ ಪಂಪ್ವೆಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಜಂಕ್ಷನ್ನಿಂದ ನೇರವಾಗಿ ಕರಾವಳಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಪಂಪ್ ವೆಲ್ ವೃತ್ತದ ಕಡೆಗೆ ಸಂಚರಿಸಬೇಕು ಎಂದು ನಗರ ಪೋಲಿಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…