ಮಂಗಳೂರು : ನಗರದ ಪಂಪ್ವೆಲ್ ಸರ್ಕಲ್ನಿಂದ ಕಂಕನಾಡಿ ಬೈಪಾಸ್ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ 2026ರ ಏಪ್ರಿಲ್ 15 ರವರೆಗೆ (7 ತಿಂಗಳು) ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾಯಿಸಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿದೆ.
ಪಂಪ್ವೆಲ್ ವೃತ್ತದಿಂದ ಕಂಕನಾಡಿ ಬೈಪಾಸ್ವರೆಗೆ ರಸ್ತೆಯ ಪ್ರಥಮ ಹಾಗೂ ದ್ವಿತೀಯ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಮಯದಲ್ಲಿ ದ್ವಿ-ಮುಖ ರಸ್ತೆಯ ಒಂದು ರಸ್ತೆಯನ್ನು ಕರಾವಳಿ ಜಂಕ್ಷನ್ನಿಂದ ಪಂಪ್ವೆಲ್ ವರೆಗೆ ವಾಹನಗಳು ಸಂಚರಿಸಲು ತಾತ್ಕಾಲಿಕವಾಗಿ ಏಕಮಖ ರಸ್ತೆಯನ್ನಾಗಿ ಘೋಷಿಸಿದೆ.
ಅದೇ ರೀತಿ ಪಂಪ್ವೆಲ್ನಿಂದ ಕಂಕನಾಡಿ ಓಲ್ಡ್ ರಸ್ತೆ – ಕಂಕನಾಡಿ ಜಂಕ್ಷನ್ ರಸ್ತೆಯನ್ನು ತಾತ್ಕಾಲಿಕವಾಗಿ ಏಕಮುಖ ರಸ್ತೆಯನ್ನಾಗಿ ಘೋಷಿಸಿದೆ. ಏಕಮುಖ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.
ಪಡೀಲ್ ಹಾಗೂ ತೊಕ್ಕೊಟ್ಟು ಕಡೆಯಿಂದ ಪಂಪ್ವೆಲ್ ವೃತ್ತಕ್ಕೆ ಬಂದು ಕರಾವಳಿ ವೃತ್ತಕ್ಕೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಓಲ್ಡ್ ರಸ್ತೆಯ ಮೂಲಕ ಕಂಕನಾಡಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಕರಾವಳಿ ವೃತ್ತದ ಕಡೆಗೆ ಸಂಚರಿಸಬೇಕು.
ಫನ್ನೀರ್ ರಸ್ತೆಯಿಂದ ಹಾಗೂ ವೆಲೆನ್ಸಿಯಾ ರಸ್ತೆಯಿಂದ ಪಂಪ್ವೆಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಜಂಕ್ಷನ್ನಿಂದ ನೇರವಾಗಿ ಕರಾವಳಿ ಜಂಕ್ಷನ್ಗೆ ಬಂದು ಬಲಕ್ಕೆ ತಿರುಗಿ ಪಂಪ್ ವೆಲ್ ವೃತ್ತದ ಕಡೆಗೆ ಸಂಚರಿಸಬೇಕು ಎಂದು ನಗರ ಪೋಲಿಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…