Featured

ಮಂಗಳೂರು: ಪಂಪ್‌ವೆಲ್‌ ಬಳಿ ಪತ್ತೆಯಾದ ನೋಟುಗಳ ಕಂತೆ ತಮಗೆ ಸೇರಿದ್ದೆಂದು ಹೇಳಿಕೊಂಡು ಮೂವರು ಬಂದಿದ್ದಾರೆ : ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ – Vishwanews24

ಮಂಗಳೂರು: ಪಂಪ್‌ವೆಲ್‌ ಬಳಿ ಪತ್ತೆಯಾದ ನೋಟುಗಳ ಕಂತೆ ತಮಗೆ ಸೇರಿದ್ದೆಂದು ಹೇಳಿಕೊಂಡು ಮೂವರು ಬಂದಿದ್ದಾರೆ : ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್

ಹಣ ತಮ್ಮದೆಂದು ನ್ಯಾಯಾಲಯದಲ್ಲಿಯೇ ಸಾಬೀತುಪಡಿಸಿ : ಮೂವರು ವ್ಯಕ್ತಿಗಳಿಗೆ ಪೊಲೀಸರ ಸೂಚನೆ

ಮಂಗಳೂರು: ನಗರದ ಪಂಪ್‌ವೆಲ್‌ ಬಸ್‌ನಿಲ್ದಾಣದ ಬಳಿ ನ.26 ರಂದು ಪತ್ತೆಯಾದ ನೋಟುಗಳ ಕಂತೆಯ ತಮಗೆ ಸೇರಿದ್ದೆಂದು ಹೇಳಿಕೊಂಡು ಮೂವರು ಬಂದಿದ್ದಾರೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಮೂವರು ಹಣ ತಮ್ಮದು ಎಂದು ಹೇಳಿಕೊಂಡಿದ್ದು ಅವರಲ್ಲಿ ಯಾರೂ ಅದನ್ನು ಸಾಬೀತುಪಡಿಸಲು ಯಾವುದೇ ಪೂರಕಪುರಾವೆಗಳನ್ನು ಒದಗಿಸಿಲ್ಲ ಎಂದು ಅವರು ಹೇಳಿದ್ದಾರೆ.

ನವೆಂಬರ್ 26 ರಂದು ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ಸ್ಥಳೀಯ ನಿವಾಸಿಗಳಾದ ಶಿವರಾಜ್ ಮತ್ತು ತುಕಾರಾಂ ಅವರಿಗೆ ನೋಟುಗಳ ಬಂಡಲ್ ಸಿಕ್ಕಿದ್ದು, ಅವರು ತಮ್ಮ ನಡುವೆ ಹಣವನ್ನು ಹಂಚಿಕೊಂಡಿದ್ದಾರೆ. ನಂತರ ಶಿವರಾಜ್ ಅವರ ಶರ್ಟ್ ಜೇಬಿನಲ್ಲಿ ನೋಟುಗಳ ಕಂತೆ ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಶಿವರಾಜ್ ಅವರನ್ನು ವಶಕ್ಕೆ ಪಡೆದು 49 ಸಾವಿರ ರೂ. ವಶಕ್ಕೆ ಪಡೆದಿದ್ದರು. ಮಾಧ್ಯಮಗಳಲ್ಲಿ ಈ ವಿಷಯ ವರದಿಯಾದಾಗ ತುಕಾರಾಂ ತನ್ನ ಬಳಿಯಿದ್ದ 2.99 ಲಕ್ಷ ರೂಪಾಯಿಯನ್ನು ತನ್ನ ಕುಟುಂಬ ಸದಸ್ಯರ ಮೂಲಕ ಠಾಣೆಗೆ ಹಿಂದಿರುಗಿಸಿದ್ದರು. ಆದರೆ ಹಣದ ಮೂಲವನ್ನು ಮತ್ತು ಬಂಡಲ್ ನಲ್ಲಿದ್ದ ಒಟ್ಟು ಮೊತ್ತವನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ.

ಇನ್ನು ಹಣ ತಮ್ಮದೆನ್ನುವುದನ್ನು ನ್ಯಾಯಾಲಯದಲ್ಲಿಯೇ ಸಾಬೀತುಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ವ್ಯಕ್ತಿಗಳಿಗೆ ಸೂಚಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago