Featured

ಮಂಗಳೂರು: ಪಂಪ್‌ವೆಲ್‌ ಬಳಿ ಪತ್ತೆಯಾದ ನೋಟುಗಳ ಕಂತೆ ತಮಗೆ ಸೇರಿದ್ದೆಂದು ಹೇಳಿಕೊಂಡು ಮೂವರು ಬಂದಿದ್ದಾರೆ : ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ – Vishwanews24

ಮಂಗಳೂರು: ಪಂಪ್‌ವೆಲ್‌ ಬಳಿ ಪತ್ತೆಯಾದ ನೋಟುಗಳ ಕಂತೆ ತಮಗೆ ಸೇರಿದ್ದೆಂದು ಹೇಳಿಕೊಂಡು ಮೂವರು ಬಂದಿದ್ದಾರೆ : ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್

ಹಣ ತಮ್ಮದೆಂದು ನ್ಯಾಯಾಲಯದಲ್ಲಿಯೇ ಸಾಬೀತುಪಡಿಸಿ : ಮೂವರು ವ್ಯಕ್ತಿಗಳಿಗೆ ಪೊಲೀಸರ ಸೂಚನೆ

ಮಂಗಳೂರು: ನಗರದ ಪಂಪ್‌ವೆಲ್‌ ಬಸ್‌ನಿಲ್ದಾಣದ ಬಳಿ ನ.26 ರಂದು ಪತ್ತೆಯಾದ ನೋಟುಗಳ ಕಂತೆಯ ತಮಗೆ ಸೇರಿದ್ದೆಂದು ಹೇಳಿಕೊಂಡು ಮೂವರು ಬಂದಿದ್ದಾರೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಮೂವರು ಹಣ ತಮ್ಮದು ಎಂದು ಹೇಳಿಕೊಂಡಿದ್ದು ಅವರಲ್ಲಿ ಯಾರೂ ಅದನ್ನು ಸಾಬೀತುಪಡಿಸಲು ಯಾವುದೇ ಪೂರಕಪುರಾವೆಗಳನ್ನು ಒದಗಿಸಿಲ್ಲ ಎಂದು ಅವರು ಹೇಳಿದ್ದಾರೆ.

ನವೆಂಬರ್ 26 ರಂದು ಪಂಪ್‌ವೆಲ್ ಬಸ್ ನಿಲ್ದಾಣದ ಬಳಿ ಸ್ಥಳೀಯ ನಿವಾಸಿಗಳಾದ ಶಿವರಾಜ್ ಮತ್ತು ತುಕಾರಾಂ ಅವರಿಗೆ ನೋಟುಗಳ ಬಂಡಲ್ ಸಿಕ್ಕಿದ್ದು, ಅವರು ತಮ್ಮ ನಡುವೆ ಹಣವನ್ನು ಹಂಚಿಕೊಂಡಿದ್ದಾರೆ. ನಂತರ ಶಿವರಾಜ್ ಅವರ ಶರ್ಟ್ ಜೇಬಿನಲ್ಲಿ ನೋಟುಗಳ ಕಂತೆ ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಶಿವರಾಜ್ ಅವರನ್ನು ವಶಕ್ಕೆ ಪಡೆದು 49 ಸಾವಿರ ರೂ. ವಶಕ್ಕೆ ಪಡೆದಿದ್ದರು. ಮಾಧ್ಯಮಗಳಲ್ಲಿ ಈ ವಿಷಯ ವರದಿಯಾದಾಗ ತುಕಾರಾಂ ತನ್ನ ಬಳಿಯಿದ್ದ 2.99 ಲಕ್ಷ ರೂಪಾಯಿಯನ್ನು ತನ್ನ ಕುಟುಂಬ ಸದಸ್ಯರ ಮೂಲಕ ಠಾಣೆಗೆ ಹಿಂದಿರುಗಿಸಿದ್ದರು. ಆದರೆ ಹಣದ ಮೂಲವನ್ನು ಮತ್ತು ಬಂಡಲ್ ನಲ್ಲಿದ್ದ ಒಟ್ಟು ಮೊತ್ತವನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ.

ಇನ್ನು ಹಣ ತಮ್ಮದೆನ್ನುವುದನ್ನು ನ್ಯಾಯಾಲಯದಲ್ಲಿಯೇ ಸಾಬೀತುಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ವ್ಯಕ್ತಿಗಳಿಗೆ ಸೂಚಿಸಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

2 days ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

2 days ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

2 days ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

2 days ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

2 days ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 days ago