ಮಂಗಳೂರು: ನಗರದ ಪಂಪ್ವೆಲ್ ಬಸ್ನಿಲ್ದಾಣದ ಬಳಿ ನ.26 ರಂದು ಪತ್ತೆಯಾದ ನೋಟುಗಳ ಕಂತೆಯ ತಮಗೆ ಸೇರಿದ್ದೆಂದು ಹೇಳಿಕೊಂಡು ಮೂವರು ಬಂದಿದ್ದಾರೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಮೂವರು ಹಣ ತಮ್ಮದು ಎಂದು ಹೇಳಿಕೊಂಡಿದ್ದು ಅವರಲ್ಲಿ ಯಾರೂ ಅದನ್ನು ಸಾಬೀತುಪಡಿಸಲು ಯಾವುದೇ ಪೂರಕಪುರಾವೆಗಳನ್ನು ಒದಗಿಸಿಲ್ಲ ಎಂದು ಅವರು ಹೇಳಿದ್ದಾರೆ.
ನವೆಂಬರ್ 26 ರಂದು ಪಂಪ್ವೆಲ್ ಬಸ್ ನಿಲ್ದಾಣದ ಬಳಿ ಸ್ಥಳೀಯ ನಿವಾಸಿಗಳಾದ ಶಿವರಾಜ್ ಮತ್ತು ತುಕಾರಾಂ ಅವರಿಗೆ ನೋಟುಗಳ ಬಂಡಲ್ ಸಿಕ್ಕಿದ್ದು, ಅವರು ತಮ್ಮ ನಡುವೆ ಹಣವನ್ನು ಹಂಚಿಕೊಂಡಿದ್ದಾರೆ. ನಂತರ ಶಿವರಾಜ್ ಅವರ ಶರ್ಟ್ ಜೇಬಿನಲ್ಲಿ ನೋಟುಗಳ ಕಂತೆ ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಶಿವರಾಜ್ ಅವರನ್ನು ವಶಕ್ಕೆ ಪಡೆದು 49 ಸಾವಿರ ರೂ. ವಶಕ್ಕೆ ಪಡೆದಿದ್ದರು. ಮಾಧ್ಯಮಗಳಲ್ಲಿ ಈ ವಿಷಯ ವರದಿಯಾದಾಗ ತುಕಾರಾಂ ತನ್ನ ಬಳಿಯಿದ್ದ 2.99 ಲಕ್ಷ ರೂಪಾಯಿಯನ್ನು ತನ್ನ ಕುಟುಂಬ ಸದಸ್ಯರ ಮೂಲಕ ಠಾಣೆಗೆ ಹಿಂದಿರುಗಿಸಿದ್ದರು. ಆದರೆ ಹಣದ ಮೂಲವನ್ನು ಮತ್ತು ಬಂಡಲ್ ನಲ್ಲಿದ್ದ ಒಟ್ಟು ಮೊತ್ತವನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ.
ಇನ್ನು ಹಣ ತಮ್ಮದೆನ್ನುವುದನ್ನು ನ್ಯಾಯಾಲಯದಲ್ಲಿಯೇ ಸಾಬೀತುಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ವ್ಯಕ್ತಿಗಳಿಗೆ ಸೂಚಿಸಿದ್ದಾರೆ.
ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.…
ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…
ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…
ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…
ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…
ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ ಚಾಲಕನಿಗೆ ಹಠಾತ್ ಹೃದಯಾಘಾತ ; ತಪ್ಪಿದ ಭಾರಿ ಅನಾಹುತ ಮಣಿಪಾಲ: ಚಲಿಸುತ್ತಿದ್ದ ಶಾಲಾ ಬಸ್ಸಿನ…