ಮಂಗಳೂರು,: ನಗರದ ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಹಲವು ವರ್ಷಗಳಿಂದ ಕೇಳುತ್ತಿದ್ದೆವು. ಆದರೆ ಸಂಸದರು ಕೈಚೆಲ್ಲಿದರು. ಬಳಿಕ ಇದೀಗ ಜಿಲ್ಲಾಡಳಿತದಿಂದಲೇ ಈ ಮೇಲ್ಸೇತುವೆ ಪೂರ್ಣಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಸೋಮವಾರ ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿ, ಪರಿಶೀಲನೆ ನಡೆಸಿತು. ಸಮಿತಿಯ ನೇತೃತ್ವದ ವಹಿಸಿದ್ದ ಐವನ್ ಡಿಸೋಜ ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು 10 ವರ್ಷಗಳ ಬಳಿಕ ಪಂಪ್ವೆಲ್ ಮೇಲ್ಸೇತುವೆ ಈಗ ವಾಹನಗಳ ಸಂಚಾರಕ್ಕೆ ಸಿದ್ಧಗೊಂಡಿರುವುದಕ್ಕೆ ಸಂಸದರಲ್ಲ, ಬದಲಾಗಿ ಜಿಲ್ಲಾಡಳಿತ ಕಾರಣ ಎಂದು ಹೇಳಿದರು.
ಹತ್ತು ವರ್ಷಗಳ ಹಿಂದೆ ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಆರಂಭಗೊಂಡಿತ್ತು. ಮೇಲ್ಸೇತುವೆ ಉದ್ಘಾಟನೆಯ ಕುರಿತು ಸಂಸದ ನಳಿನ್ ಕುಮಾರ್ ಕಟೀಲು ಅನೇಕ ಬಾರಿ ಗಡುವು ನೀಡಿದ್ದರು. ಆದರೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಕಳೆದ ಜನವರಿ 1ರಂದು ಕೊನೆಯ ಗಡುವು ನೀಡಿದರು. ಆದರೂ ಕಾಮಗಾರಿ ಪೂರ್ತಿಯಾಗದೆ ಅವರು ಕೈಚೆಲ್ಲಿದ್ದರು ಎಂದು ಹೇಳಿದರು.
‘ನಾನು ಹೇಳಿದರೂ ಕೇಳುವುದಿಲ್ಲ’ ಎಂಬ ಮಾತನ್ನು ಸಂಸದರು ಅಸಹಾಯಕತೆಯಿಂದ ಹೇಳಿದ್ದರು. ನಂತರ ಈ ಕಾಮಗಾರಿಯನ್ನು ಜಿಲ್ಲಾಡಳಿತ ಕೈಗೆತ್ತಿಕೊಂಡಿತ್ತು. ಆ ಬಳಿಕ ಇದೀಗ ವಾಹನ ಸಂಚಾರಕ್ಕೆ ಸಾಧ್ಯವಾಗುವಷ್ಟು ಮೇಲ್ಸೇತುವೆ ಸಿದ್ಧಗೊಂಡಿದೆ. ಸಂಸದರು ಕೈಬಿಟ್ಟ ಮೇಲಾದರೂ ಕಾಮಗಾರಿ ಇಷ್ಟಾದರೂ ಪ್ರಗತಿ ಆಯ್ತಲ್ಲ. ಅದಕ್ಕಾಗಿ ಜಿಲ್ಲಾಡಳಿತವನ್ನು ಅಭಿನಂದಿಸುವುದಾಗಿ ಐವನ್ ಹೇಳಿದರು.
ಕಳೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿದಾಗ ಜ.31ಕ್ಕೆ ಮೇಲ್ಸೇತುವೆಯನ್ನು ಬಿಟ್ಟುಕೊಡುವುದಾಗಿ ಜಿಲ್ಲಾಡಳಿತ ಹೇಳಿತ್ತು. ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಕೂಡ ಅದೇ ದಿನಾಂಕವನ್ನು ಹೇಳಿದ್ದಾರೆ. ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಇಷ್ಟರ ಮಟ್ಟಿಗಾದರೂ ಪೂರ್ತಿ ಆಗಿರುವುದಕ್ಕೆ ಸಂತೃಪ್ತಿ ಇದೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ಕುಮಾರ್, ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮನಪಾ ಸದಸ್ಯರಾದ ಪ್ರವೀಣ್ ಆಳ್ವ, ನವೀನ್ ಡಿಸೋಜ, ಕಾಂಗ್ರೆಸ್ ಮುಖಂಡರಾದ ಕೇಶವ್ ಮರೋಳಿ, ಆಶಿತ್ ಪಿರೇರ, ನೀರಜ್ ಚಂದ್ರ ಪಾಲ್, ಜಯಶೀಲ ಅಡ್ಯಂತಾಯ, ಶಂಸುದ್ದೀನ್ ಬಂದರ್, ಹೇಮಂತ ಗರೋಡಿ, ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಮತ್ತಿತರರು ಜೊತೆಗಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…