ಮಂಗಳೂರು: ಪಂಪ್‌ವೆಲ್‌ ಮೇಲ್ಸೇತುವೆ ಪೂರ್ಣಗೊಳಿಸಲು ಕಾರಣ ಜಿಲ್ಲಾಡಳಿತ : ಐವನ್‌ ಡಿಸೋಜಾ -Vishwanews24

ಮಂಗಳೂರು,: ನಗರದ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಹಲವು ವರ್ಷಗಳಿಂದ ಕೇಳುತ್ತಿದ್ದೆವು. ಆದರೆ ಸಂಸದರು ಕೈಚೆಲ್ಲಿದರು. ಬಳಿಕ ಇದೀಗ ಜಿಲ್ಲಾಡಳಿತದಿಂದಲೇ ಈ ಮೇಲ್ಸೇತುವೆ ಪೂರ್ಣಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಸೋಮವಾರ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿ, ಪರಿಶೀಲನೆ ನಡೆಸಿತು. ಸಮಿತಿಯ ನೇತೃತ್ವದ ವಹಿಸಿದ್ದ ಐವನ್ ಡಿಸೋಜ ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು 10 ವರ್ಷಗಳ ಬಳಿಕ ಪಂಪ್‌ವೆಲ್ ಮೇಲ್ಸೇತುವೆ ಈಗ ವಾಹನಗಳ ಸಂಚಾರಕ್ಕೆ ಸಿದ್ಧಗೊಂಡಿರುವುದಕ್ಕೆ ಸಂಸದರಲ್ಲ, ಬದಲಾಗಿ ಜಿಲ್ಲಾಡಳಿತ ಕಾರಣ ಎಂದು ಹೇಳಿದರು.

ಹತ್ತು ವರ್ಷಗಳ ಹಿಂದೆ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಆರಂಭಗೊಂಡಿತ್ತು. ಮೇಲ್ಸೇತುವೆ ಉದ್ಘಾಟನೆಯ ಕುರಿತು ಸಂಸದ ನಳಿನ್ ಕುಮಾರ್ ಕಟೀಲು ಅನೇಕ ಬಾರಿ ಗಡುವು ನೀಡಿದ್ದರು. ಆದರೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಕಳೆದ ಜನವರಿ 1ರಂದು ಕೊನೆಯ ಗಡುವು ನೀಡಿದರು. ಆದರೂ ಕಾಮಗಾರಿ ಪೂರ್ತಿಯಾಗದೆ ಅವರು ಕೈಚೆಲ್ಲಿದ್ದರು ಎಂದು ಹೇಳಿದರು.

‘ನಾನು ಹೇಳಿದರೂ ಕೇಳುವುದಿಲ್ಲ’ ಎಂಬ ಮಾತನ್ನು ಸಂಸದರು ಅಸಹಾಯಕತೆಯಿಂದ ಹೇಳಿದ್ದರು. ನಂತರ ಈ ಕಾಮಗಾರಿಯನ್ನು ಜಿಲ್ಲಾಡಳಿತ ಕೈಗೆತ್ತಿಕೊಂಡಿತ್ತು. ಆ ಬಳಿಕ ಇದೀಗ ವಾಹನ ಸಂಚಾರಕ್ಕೆ ಸಾಧ್ಯವಾಗುವಷ್ಟು ಮೇಲ್ಸೇತುವೆ ಸಿದ್ಧಗೊಂಡಿದೆ. ಸಂಸದರು ಕೈಬಿಟ್ಟ ಮೇಲಾದರೂ ಕಾಮಗಾರಿ ಇಷ್ಟಾದರೂ ಪ್ರಗತಿ ಆಯ್ತಲ್ಲ. ಅದಕ್ಕಾಗಿ ಜಿಲ್ಲಾಡಳಿತವನ್ನು ಅಭಿನಂದಿಸುವುದಾಗಿ ಐವನ್ ಹೇಳಿದರು.

ಕಳೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿದಾಗ ಜ.31ಕ್ಕೆ ಮೇಲ್ಸೇತುವೆಯನ್ನು ಬಿಟ್ಟುಕೊಡುವುದಾಗಿ ಜಿಲ್ಲಾಡಳಿತ ಹೇಳಿತ್ತು. ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಕೂಡ ಅದೇ ದಿನಾಂಕವನ್ನು ಹೇಳಿದ್ದಾರೆ. ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಇಷ್ಟರ ಮಟ್ಟಿಗಾದರೂ ಪೂರ್ತಿ ಆಗಿರುವುದಕ್ಕೆ ಸಂತೃಪ್ತಿ ಇದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್‌ಕುಮಾರ್, ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮನಪಾ ಸದಸ್ಯರಾದ ಪ್ರವೀಣ್ ಆಳ್ವ, ನವೀನ್ ಡಿಸೋಜ, ಕಾಂಗ್ರೆಸ್ ಮುಖಂಡರಾದ ಕೇಶವ್ ಮರೋಳಿ, ಆಶಿತ್ ಪಿರೇರ, ನೀರಜ್ ಚಂದ್ರ ಪಾಲ್, ಜಯಶೀಲ ಅಡ್ಯಂತಾಯ, ಶಂಸುದ್ದೀನ್ ಬಂದರ್, ಹೇಮಂತ ಗರೋಡಿ, ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಮತ್ತಿತರರು ಜೊತೆಗಿದ್ದರು.

Vishwa News 24

Recent Posts

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ – vishwanews24

ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…

2 hours ago

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ – vishwanews24

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…

2 hours ago

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ – vishwanews24

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…

2 hours ago

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…

2 hours ago

ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…

2 hours ago

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…

3 hours ago