ಮಂಗಳೂರು : ಪಂಪ್ ವೆಲ್ ನಲ್ಲಿ ಇತ್ತೀಚೆಗೆ ಪತ್ತೆಯಾದ ಲಾಕ್ ಡೌನ್ ಬೇಕು ಹಾಗೂ ಇತರ ಕೆಲವು ಆಕ್ಷೇಪಾರ್ಹ ಸಂದೇಶಗಳಿದ್ದ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ.
ಇವರು ನಗರದ ಕಾಲೇಜೊಂದರ ವಿದ್ಯಾರ್ಥಿಗಳು. ಲಾಕ್ ಡೌನ್ ಆದರೆ ಎಕ್ಸಾಮ್ ಮುಂದಕ್ಕೆ ಹೊಗುತ್ತದೆ ಎಂಬ ಉದ್ದೇಶದಿಂದ ಬರೆದಿದ್ದೇವೆ ಎಂಬುದಾಗಿ ಆರೋಪಿಗಳು ಹೇಳಿದ್ದಾರೆ. ಇದರ ಹಿಂದೆ ಬೇರೆ ಯಾರಾದರೂ ಇದ್ಧಾರೆಯೆ ಎಂಬ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಕರ್ನಾಟಕ ಬ್ಯಾಂಕ್ ಹೆಡ್ ಆಫೀಸ್ ಮುಂಭಾಗದಲ್ಲಿರುವ ಪಂಪವೆಲ್ ಫ್ಲೈ ಓವರ್ ಗೋಡೆ ಮೇಲೆ ಅವಹೇಳನಕಾರಿ ಪದ ಹಾಗೂ ಲಾಕ್ ಡೌನ್ ಬೇಕಾಗಿದೆ ಎನ್ನುವ ಬರಹವನ್ನು ಕೆಂಪು ಬಣ್ಣದಲ್ಲಿ ದೊಡ್ಡದಾಗಿ ಬರೆದಿರುವುದು ಏ.20ರ ಮಂಗಳವಾರ ಮುಂಜಾನೆ ಪತ್ತೆಯಾಗಿತ್ತು. ಈ ಸಂಬಂಧ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸಾಗಿದ್ದಾರೆ.
ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…
ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ…
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ…
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…