Featured

ಮಂಗಳೂರು : ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರು ಹರಿಸುವ ಬೆವರಿನಿಂದ ದೇಶದಾದ್ಯಂತ ಭಾರತೀಯ ಜನತಾ ಪಾರ್ಟಿಯು ಸದೃಢ ವೃಕ್ಷದಂತೆ ಬೆಳೆದಿದೆ : ಶಾಸಕ ವೇದವ್ಯಾಸ್ ಕಾಮತ್ -Vishwanews24

ಮಂಗಳೂರು : ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರು ಹರಿಸುವ ಬೆವರಿನಿಂದ ದೇಶದಾದ್ಯಂತ ಭಾರತೀಯ ಜನತಾ ಪಾರ್ಟಿಯು ಸದೃಢ ವೃಕ್ಷದಂತೆ ಬೆಳೆದಿದೆ : ಶಾಸಕ ವೇದವ್ಯಾಸ್ ಕಾಮತ್ -Vishwanews24

ಮಂಗಳೂರು: ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರು ಹರಿಸುವ ಬೆವರಿನಿಂದ ದೇಶದಾದ್ಯಂತ ಭಾರತೀಯ ಜನತಾ ಪಾರ್ಟಿಯು ಸದೃಢ ವೃಕ್ಷದಂತೆ ಬೆಳೆದಿದೆ. ಬಿಜೆಪಿಯ ಶಕ್ತಿ ಕಾರ್ಯಕರ್ತರ ಭುಜದಲ್ಲಡಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಮರೋಳಿ ವಾರ್ಡಿನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಗೆ ತನ್ನದೇ ಆದ ಸಿದ್ಧಾಂತವಿದೆ. ರಾಷ್ಟ್ರೀಯತೆ ಹಾಗೂ ಗಾಂಧೀ ಪ್ರಣೀತ ಸಮಾಜ ನಿರ್ಮಾಣದ ತಳಹದಿಯ ಮೇಲೆ ನಡೆಯುವ ಬಿಜೆಪಿಗೆ ಸರ್ವಸ್ವವನ್ನೂ ಧಾರೆಯೆರೆದು ಪಕ್ಷದ ಬಲವರ್ಧನೆಗಾಗಿ ಅವಿರತವಾಗಿ ಶ್ರಮಿಸುವ ಕಾರ್ಯಕರ್ತರೇ ಶಕ್ತಿ ಎಂದರು.

ಇನ್ನುಳಿದ ರಾಜಕೀಯ ಪಕ್ಷಗಳಿಂದ ಭಿನ್ನವಾಗಿ ಒಂದು ಸಿದ್ಧಾಂತಕ್ಕೆ ಅಂಟಿಕೊಂಡು ತನ್ನ ತತ್ವ ಆದರ್ಶಗಳೊಂದಿಗೆ ರಾಜಿ ಮಾಡಿಕೊಳ್ಳದೆ ಸುಧೀರ್ಘ ಕಾಲ ಪಕ್ಷ ಹೇಗೆ ನಡೆದುಕೊಂಡು ಬಂದಿದೆಯೋ ಅದು ಇನ್ನು ಮುಂದೆಯೂ ಮುಂದುವರಿಯುತ್ತದೆ.

ನವೋದಯ’ ಆ್ಯಪ್ ಮತ್ತು ತಂತ್ರಾಂಶದ ಮೂಲಕ ಮನೆ ಬಾಗಿಲಿಗೇ ಮಾಸಾಶನ ಅಭಿಯಾನ‌ಕ್ಕೆ ಮುಖ್ಯಮಂತ್ರಿ ಚಾಲನೆ-Vishwanews24

2014ರ ಲೋಕಸಭಾ ಚುನಾವಣೆಯ ವೇಳೆ ಒಬ್ಬೊಬ್ಬ ಕಾರ್ಯಕರ್ತರೂ ಕೂಡ ನಿದ್ದೆ ಅನ್ನಾಹಾರ ಬಿಟ್ಟು ಪಕ್ಷಕ್ಕಾಗಿ ದುಡಿದ ಫಲವಾಗಿ ಇಂದು ಭಾರತದಲ್ಲಿ ಅನೇಕ ಬದಲಾವಣೆಗಳಾಗಿವೆ. ಅಯೋಧ್ಯೆಯ ಪಾವನ ಭೂಮಿಯಲ್ಲಿ ಪ್ರಭು ಶ್ರೀರಾಮನ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ 370ನೇ ವಿಧಿ ರದ್ದು, ತ್ರಿವಳಿ ತಲಾಖ್ ನಿಷೇಧ, ಪೌರತ್ವ ಕಾಯ್ದೆ ತಿದ್ದುಪಡಿಯಂತಹ ಅಸಾಧ್ಯವೆನಿಸಿದ್ದಂತಹ ಕಾರ್ಯಗಳೂ ಸಾಕಾರಗೊಂಡಿದೆ. ಇವೆಲ್ಲದರ ಶ್ರೇಯಸ್ಸು ಪಕ್ಷದ ಕಾರ್ಯಕರ್ತರಿಗೆ ಸಲ್ಲಬೇಕು ಎಂದರು.

ಮುಂಬರುವ ದಿನಗಳಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ 38 ವಾರ್ಡುಗಳಲ್ಲೂ ಕೂಡ ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು. ಆ ಮೂಲಕ ಸಂಘಟನೆಯ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ,ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅದ್ಯಕ್ಷರಾದ ಪೂರ್ಣಿಮಾ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅದ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಂಚಾಯತ್ ರಾಜ್ ರಾಜ್ಯ ಪ್ರಕೋಷ್ಟದ ಸಹ ಸಂಚಾಲಕರಾದ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಉಪಾಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ, ಸುರೇಂದ್ರ ಜೆಪ್ಪಿನಮೊಗರು, ಪೂರ್ವ ಶಕ್ತಿಕೇಂದ್ರ ಅದ್ಯಕ್ಷರಾದ ಅಜಯ್ ಕುಲಶೇಖರ, ಕಾರ್ಯದರ್ಶಿ ರವಿಚಂದ್ರ, ಮರೋಳಿ ಶಕ್ತಿಕೇಂದ್ರ ಅದ್ಯಕ್ಷರಾದ ಜಗನ್ನಾಥ್ ಅಡುಮರೋಳಿ, ಜಗನ್ನಾಥ ಶೆಣೈ ಹಾಗೂ ಬಿಜೆಪಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ನಿಜವಾದ ರೈತರು ಹಿಂಸಾಚಾರ ನಡೆಸಲು ಸಾಧ್ಯವಿಲ್ಲ : ಶೋಭಾ ಕರಂದ್ಲಾಜೆ -Vishwanews24

 

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

7 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

32 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

36 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

43 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

54 minutes ago

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

18 hours ago