Featured

ಮಂಗಳೂರು : ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರು ಹರಿಸುವ ಬೆವರಿನಿಂದ ದೇಶದಾದ್ಯಂತ ಭಾರತೀಯ ಜನತಾ ಪಾರ್ಟಿಯು ಸದೃಢ ವೃಕ್ಷದಂತೆ ಬೆಳೆದಿದೆ : ಶಾಸಕ ವೇದವ್ಯಾಸ್ ಕಾಮತ್ -Vishwanews24

ಮಂಗಳೂರು : ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರು ಹರಿಸುವ ಬೆವರಿನಿಂದ ದೇಶದಾದ್ಯಂತ ಭಾರತೀಯ ಜನತಾ ಪಾರ್ಟಿಯು ಸದೃಢ ವೃಕ್ಷದಂತೆ ಬೆಳೆದಿದೆ : ಶಾಸಕ ವೇದವ್ಯಾಸ್ ಕಾಮತ್ -Vishwanews24

ಮಂಗಳೂರು: ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರು ಹರಿಸುವ ಬೆವರಿನಿಂದ ದೇಶದಾದ್ಯಂತ ಭಾರತೀಯ ಜನತಾ ಪಾರ್ಟಿಯು ಸದೃಢ ವೃಕ್ಷದಂತೆ ಬೆಳೆದಿದೆ. ಬಿಜೆಪಿಯ ಶಕ್ತಿ ಕಾರ್ಯಕರ್ತರ ಭುಜದಲ್ಲಡಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಮರೋಳಿ ವಾರ್ಡಿನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಗೆ ತನ್ನದೇ ಆದ ಸಿದ್ಧಾಂತವಿದೆ. ರಾಷ್ಟ್ರೀಯತೆ ಹಾಗೂ ಗಾಂಧೀ ಪ್ರಣೀತ ಸಮಾಜ ನಿರ್ಮಾಣದ ತಳಹದಿಯ ಮೇಲೆ ನಡೆಯುವ ಬಿಜೆಪಿಗೆ ಸರ್ವಸ್ವವನ್ನೂ ಧಾರೆಯೆರೆದು ಪಕ್ಷದ ಬಲವರ್ಧನೆಗಾಗಿ ಅವಿರತವಾಗಿ ಶ್ರಮಿಸುವ ಕಾರ್ಯಕರ್ತರೇ ಶಕ್ತಿ ಎಂದರು.

ಇನ್ನುಳಿದ ರಾಜಕೀಯ ಪಕ್ಷಗಳಿಂದ ಭಿನ್ನವಾಗಿ ಒಂದು ಸಿದ್ಧಾಂತಕ್ಕೆ ಅಂಟಿಕೊಂಡು ತನ್ನ ತತ್ವ ಆದರ್ಶಗಳೊಂದಿಗೆ ರಾಜಿ ಮಾಡಿಕೊಳ್ಳದೆ ಸುಧೀರ್ಘ ಕಾಲ ಪಕ್ಷ ಹೇಗೆ ನಡೆದುಕೊಂಡು ಬಂದಿದೆಯೋ ಅದು ಇನ್ನು ಮುಂದೆಯೂ ಮುಂದುವರಿಯುತ್ತದೆ.

ನವೋದಯ’ ಆ್ಯಪ್ ಮತ್ತು ತಂತ್ರಾಂಶದ ಮೂಲಕ ಮನೆ ಬಾಗಿಲಿಗೇ ಮಾಸಾಶನ ಅಭಿಯಾನ‌ಕ್ಕೆ ಮುಖ್ಯಮಂತ್ರಿ ಚಾಲನೆ-Vishwanews24

2014ರ ಲೋಕಸಭಾ ಚುನಾವಣೆಯ ವೇಳೆ ಒಬ್ಬೊಬ್ಬ ಕಾರ್ಯಕರ್ತರೂ ಕೂಡ ನಿದ್ದೆ ಅನ್ನಾಹಾರ ಬಿಟ್ಟು ಪಕ್ಷಕ್ಕಾಗಿ ದುಡಿದ ಫಲವಾಗಿ ಇಂದು ಭಾರತದಲ್ಲಿ ಅನೇಕ ಬದಲಾವಣೆಗಳಾಗಿವೆ. ಅಯೋಧ್ಯೆಯ ಪಾವನ ಭೂಮಿಯಲ್ಲಿ ಪ್ರಭು ಶ್ರೀರಾಮನ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ 370ನೇ ವಿಧಿ ರದ್ದು, ತ್ರಿವಳಿ ತಲಾಖ್ ನಿಷೇಧ, ಪೌರತ್ವ ಕಾಯ್ದೆ ತಿದ್ದುಪಡಿಯಂತಹ ಅಸಾಧ್ಯವೆನಿಸಿದ್ದಂತಹ ಕಾರ್ಯಗಳೂ ಸಾಕಾರಗೊಂಡಿದೆ. ಇವೆಲ್ಲದರ ಶ್ರೇಯಸ್ಸು ಪಕ್ಷದ ಕಾರ್ಯಕರ್ತರಿಗೆ ಸಲ್ಲಬೇಕು ಎಂದರು.

ಮುಂಬರುವ ದಿನಗಳಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ 38 ವಾರ್ಡುಗಳಲ್ಲೂ ಕೂಡ ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲಾಗುವುದು. ಆ ಮೂಲಕ ಸಂಘಟನೆಯ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ,ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅದ್ಯಕ್ಷರಾದ ಪೂರ್ಣಿಮಾ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅದ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಂಚಾಯತ್ ರಾಜ್ ರಾಜ್ಯ ಪ್ರಕೋಷ್ಟದ ಸಹ ಸಂಚಾಲಕರಾದ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಉಪಾಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿ ರೂಪಾ ಡಿ ಬಂಗೇರ, ಸುರೇಂದ್ರ ಜೆಪ್ಪಿನಮೊಗರು, ಪೂರ್ವ ಶಕ್ತಿಕೇಂದ್ರ ಅದ್ಯಕ್ಷರಾದ ಅಜಯ್ ಕುಲಶೇಖರ, ಕಾರ್ಯದರ್ಶಿ ರವಿಚಂದ್ರ, ಮರೋಳಿ ಶಕ್ತಿಕೇಂದ್ರ ಅದ್ಯಕ್ಷರಾದ ಜಗನ್ನಾಥ್ ಅಡುಮರೋಳಿ, ಜಗನ್ನಾಥ ಶೆಣೈ ಹಾಗೂ ಬಿಜೆಪಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ನಿಜವಾದ ರೈತರು ಹಿಂಸಾಚಾರ ನಡೆಸಲು ಸಾಧ್ಯವಿಲ್ಲ : ಶೋಭಾ ಕರಂದ್ಲಾಜೆ -Vishwanews24

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

11 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

11 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

11 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

12 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

12 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

13 hours ago